5:41 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್

15/07/2021, 07:32

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು.

ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ . ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.

ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು .ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು . ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಮುಖಂಡರಾದ  ಕೆ.ಕೆ.ಮಂಜುನಾಥರೆಡ್ಡಿ ,ಅಧಿಕಾರಿ ಆಶಾರಾಣಪ್ಪ , ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು