9:25 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್

15/07/2021, 07:32

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು.

ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ . ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.

ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು .ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು . ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಮುಖಂಡರಾದ  ಕೆ.ಕೆ.ಮಂಜುನಾಥರೆಡ್ಡಿ ,ಅಧಿಕಾರಿ ಆಶಾರಾಣಪ್ಪ , ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು