9:48 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಕೋಲಿ ಸಮಾಜ ಎಸ್ಟಿಗೆ ಸೇರಿಸಲು ರಾಜ್ಯ – ಕೇಂದ್ರ ಸರಕಾರಗಳ ನಿರ್ಲಕ್ಷ್ಯ: ರಾಜ್ಯ ಸಂ. ಕಾರ್ಯದರ್ಶಿ ಉಮೇಶ ಮುದ್ನಾಳ ಆರೋಪ

28/06/2024, 18:07

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸೈದಾಪೂರ ಹೋಬಳಿಯಲಿ ಬರುವ ಅಜಲಾಪುರ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ನಾಮಫಲಕ ಲೋಕಾರ್ಪಣೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ, ಸಮಾಜ ಬಾಂಧವರು ನಿಜ ಅಂಬಿಗರ ಚೌಡಯ್ಯನವರ ತತ್ವಾದರ್ಶ ಪ್ರತಿಯೊಬ್ಬರು ಪಾಲಿಸಬೇಕು ಎಂದು ಕರೆ ನೀಡಿದರು.
ಕೋಲಿ ಸಮಾಜ ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರಣ ಏಕೆಂದರೆ, ಟೋಕ್ರಿ ಕೋಲಿ ಬಿಟ್ಟುಹೊದ ಪರ್ಯಾಯ ಪದಗಳಾದ ಕೋಲಿ ಕಬ್ಬಲಿಗ, ಅಂಬಿಗ, ಬೆಸ್ತ ಸೇರಿದಂತೆ ಅನೇಕ ಪದಗಳನ್ನು ಪರಿಶಿಷ್ಟ ಪಂಗಡದಲ್ಲಿ ಸೇರಿಸಲು ವಿಠಲ್ ಹೇರೂರು ಅವರು ಸಾಕಷ್ಟು ವರ್ಷಗಳ ಹೋರಾಟ ಮಾಡಿದರೂ ಸಹ ಸೇರ್ಪಡೆ ಮಾಡದೆ ರಾಜಕಾರಣಿಗಳು ಅನ್ಯಾಯ ಮಾಡಿದ್ದಾರೆ.
ಚುನಾವಣೆ ಬಂದಾಗ ಮಾತ್ರ ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಇಲ್ಲಸಲ್ಲದ ಸುಳ್ಳು ಹೇಳುತ್ತಾ ಮತ ಪಡೆಯುತ್ತಾ ಬಂದಿದ್ದು ಆ ಪಕ್ಷಗಳಲ್ಲಿರುವ ನಮ್ಮ ಮುಖಂಡರಿಂದ ಹೇಳಿಕೆ ಕೊಡಿಸುತ್ತಾ ಮರಳು ಮಾಡುತ್ತಾ ಬಂದಿದ್ದಾರೆ. ಆದ್ದರಿಂದ ಸಮಾಜಿಕರು ಜಾಗೃತರಾಗಬೇಕು, ರಾಜಕಾರಣಿಗಳು ಬಂದಾಗ ಪ್ರತಿಯೊಬ್ಬರು ಪ್ರಶ್ನೆ ಕೇಳುವಂತಾಗಬೇಕು ಅಂದಾಗ ಮಾತ್ರ ಸಮಾಜವನ್ನು ಗುರ್ತಿಸುತ್ತಾರೆ. ಹೀಗಾಗಿ ಜಾಗೃತರಾಗಿ ಎಂದು ಕರೆ ನೀಡಿದರು.


ಇದಕ್ಕೂ ಮುನ್ನ ಪ್ರಮುಖ ರಸ್ತೆಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರವನ್ನು ಛತ್ರಿ ಚಾಮರಗಳೊಂದಿಗೆ ಮೆರವಣಿಗೆ ಮಾಡಲಾಯಿತು.
ಈ ವೇಳೆ ರಫೀಕ್ ಪಟೇಲ್, ಅಂಜಿನೇಯ, ಬಾಬಾಖಾನ್, ಚೆನ್ನಪ್ಪ, ನಿಂಗು, ಶಂಕ್ರಪ್ಪ, ಚಂದ್ರಪ್ಪ, ಸಿದ್ರಾಮ, ಭೀಮಪ್ಪ, ನಿಂಗಪ್ಪ, ಶಿವರಾಜ, ತಾಯಪ್ಪ, ಬಾಲರಾಜ, ಸಾಯಿಬಣ್ಣ, ಭೀಮಶೆಪ್ಪ, ಅಚಿಜಪ್ಪ, ಚಂದ್ರಶೇಖರ, ಸುರೇಶ, ವೆಂಕಟಪ್ಪ, ಬಾಲಪ್ಪ, ಬಸವರಾಜ, ಶಂಕ್ರಮ್ಮ, ಮಲ್ಲಮ್ಮ, ದೇವಮ್ಮ, ಅಮೃತಾ, ಮಾದೇವಿ, ಅನಂತಮ್ಮ, ಪೋಷಮ್ಮ, ಶಾಮಮ್ಮ, ರಾಜೇಶ್ವರ, ಸುನಿತಾ ಸೇರಿ ಅನೇಕರಿದ್ದರು.
ಬನ್ನಪ್ಪ ಸ್ವಾಗತಿಸಿದರು, ವಿಶ್ವನಾಥ ರೆಡ್ಡಿ ನಿರೂಪಿಸಿದರು. ಗೋವಿಂದ ಇಡ್ಲೂರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು