3:13 PM Sunday30 - June 2024
ಬ್ರೇಕಿಂಗ್ ನ್ಯೂಸ್
ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ… ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ

ಇತ್ತೀಚಿನ ಸುದ್ದಿ

ಕೋಲಿ ಸಮಾಜ ಎಸ್ಟಿಗೆ ಸೇರಿಸಲು ರಾಜ್ಯ – ಕೇಂದ್ರ ಸರಕಾರಗಳ ನಿರ್ಲಕ್ಷ್ಯ: ರಾಜ್ಯ ಸಂ. ಕಾರ್ಯದರ್ಶಿ ಉಮೇಶ ಮುದ್ನಾಳ ಆರೋಪ

28/06/2024, 18:07

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸೈದಾಪೂರ ಹೋಬಳಿಯಲಿ ಬರುವ ಅಜಲಾಪುರ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ನಾಮಫಲಕ ಲೋಕಾರ್ಪಣೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ, ಸಮಾಜ ಬಾಂಧವರು ನಿಜ ಅಂಬಿಗರ ಚೌಡಯ್ಯನವರ ತತ್ವಾದರ್ಶ ಪ್ರತಿಯೊಬ್ಬರು ಪಾಲಿಸಬೇಕು ಎಂದು ಕರೆ ನೀಡಿದರು.
ಕೋಲಿ ಸಮಾಜ ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರಣ ಏಕೆಂದರೆ, ಟೋಕ್ರಿ ಕೋಲಿ ಬಿಟ್ಟುಹೊದ ಪರ್ಯಾಯ ಪದಗಳಾದ ಕೋಲಿ ಕಬ್ಬಲಿಗ, ಅಂಬಿಗ, ಬೆಸ್ತ ಸೇರಿದಂತೆ ಅನೇಕ ಪದಗಳನ್ನು ಪರಿಶಿಷ್ಟ ಪಂಗಡದಲ್ಲಿ ಸೇರಿಸಲು ವಿಠಲ್ ಹೇರೂರು ಅವರು ಸಾಕಷ್ಟು ವರ್ಷಗಳ ಹೋರಾಟ ಮಾಡಿದರೂ ಸಹ ಸೇರ್ಪಡೆ ಮಾಡದೆ ರಾಜಕಾರಣಿಗಳು ಅನ್ಯಾಯ ಮಾಡಿದ್ದಾರೆ.
ಚುನಾವಣೆ ಬಂದಾಗ ಮಾತ್ರ ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಇಲ್ಲಸಲ್ಲದ ಸುಳ್ಳು ಹೇಳುತ್ತಾ ಮತ ಪಡೆಯುತ್ತಾ ಬಂದಿದ್ದು ಆ ಪಕ್ಷಗಳಲ್ಲಿರುವ ನಮ್ಮ ಮುಖಂಡರಿಂದ ಹೇಳಿಕೆ ಕೊಡಿಸುತ್ತಾ ಮರಳು ಮಾಡುತ್ತಾ ಬಂದಿದ್ದಾರೆ. ಆದ್ದರಿಂದ ಸಮಾಜಿಕರು ಜಾಗೃತರಾಗಬೇಕು, ರಾಜಕಾರಣಿಗಳು ಬಂದಾಗ ಪ್ರತಿಯೊಬ್ಬರು ಪ್ರಶ್ನೆ ಕೇಳುವಂತಾಗಬೇಕು ಅಂದಾಗ ಮಾತ್ರ ಸಮಾಜವನ್ನು ಗುರ್ತಿಸುತ್ತಾರೆ. ಹೀಗಾಗಿ ಜಾಗೃತರಾಗಿ ಎಂದು ಕರೆ ನೀಡಿದರು.


ಇದಕ್ಕೂ ಮುನ್ನ ಪ್ರಮುಖ ರಸ್ತೆಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರವನ್ನು ಛತ್ರಿ ಚಾಮರಗಳೊಂದಿಗೆ ಮೆರವಣಿಗೆ ಮಾಡಲಾಯಿತು.
ಈ ವೇಳೆ ರಫೀಕ್ ಪಟೇಲ್, ಅಂಜಿನೇಯ, ಬಾಬಾಖಾನ್, ಚೆನ್ನಪ್ಪ, ನಿಂಗು, ಶಂಕ್ರಪ್ಪ, ಚಂದ್ರಪ್ಪ, ಸಿದ್ರಾಮ, ಭೀಮಪ್ಪ, ನಿಂಗಪ್ಪ, ಶಿವರಾಜ, ತಾಯಪ್ಪ, ಬಾಲರಾಜ, ಸಾಯಿಬಣ್ಣ, ಭೀಮಶೆಪ್ಪ, ಅಚಿಜಪ್ಪ, ಚಂದ್ರಶೇಖರ, ಸುರೇಶ, ವೆಂಕಟಪ್ಪ, ಬಾಲಪ್ಪ, ಬಸವರಾಜ, ಶಂಕ್ರಮ್ಮ, ಮಲ್ಲಮ್ಮ, ದೇವಮ್ಮ, ಅಮೃತಾ, ಮಾದೇವಿ, ಅನಂತಮ್ಮ, ಪೋಷಮ್ಮ, ಶಾಮಮ್ಮ, ರಾಜೇಶ್ವರ, ಸುನಿತಾ ಸೇರಿ ಅನೇಕರಿದ್ದರು.
ಬನ್ನಪ್ಪ ಸ್ವಾಗತಿಸಿದರು, ವಿಶ್ವನಾಥ ರೆಡ್ಡಿ ನಿರೂಪಿಸಿದರು. ಗೋವಿಂದ ಇಡ್ಲೂರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು