12:52 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕೋಲಿ ಸಮಾಜ ಎಸ್ಟಿಗೆ ಸೇರಿಸಲು ರಾಜ್ಯ – ಕೇಂದ್ರ ಸರಕಾರಗಳ ನಿರ್ಲಕ್ಷ್ಯ: ರಾಜ್ಯ ಸಂ. ಕಾರ್ಯದರ್ಶಿ ಉಮೇಶ ಮುದ್ನಾಳ ಆರೋಪ

28/06/2024, 18:07

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸೈದಾಪೂರ ಹೋಬಳಿಯಲಿ ಬರುವ ಅಜಲಾಪುರ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ನಾಮಫಲಕ ಲೋಕಾರ್ಪಣೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ, ಸಮಾಜ ಬಾಂಧವರು ನಿಜ ಅಂಬಿಗರ ಚೌಡಯ್ಯನವರ ತತ್ವಾದರ್ಶ ಪ್ರತಿಯೊಬ್ಬರು ಪಾಲಿಸಬೇಕು ಎಂದು ಕರೆ ನೀಡಿದರು.
ಕೋಲಿ ಸಮಾಜ ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರಣ ಏಕೆಂದರೆ, ಟೋಕ್ರಿ ಕೋಲಿ ಬಿಟ್ಟುಹೊದ ಪರ್ಯಾಯ ಪದಗಳಾದ ಕೋಲಿ ಕಬ್ಬಲಿಗ, ಅಂಬಿಗ, ಬೆಸ್ತ ಸೇರಿದಂತೆ ಅನೇಕ ಪದಗಳನ್ನು ಪರಿಶಿಷ್ಟ ಪಂಗಡದಲ್ಲಿ ಸೇರಿಸಲು ವಿಠಲ್ ಹೇರೂರು ಅವರು ಸಾಕಷ್ಟು ವರ್ಷಗಳ ಹೋರಾಟ ಮಾಡಿದರೂ ಸಹ ಸೇರ್ಪಡೆ ಮಾಡದೆ ರಾಜಕಾರಣಿಗಳು ಅನ್ಯಾಯ ಮಾಡಿದ್ದಾರೆ.
ಚುನಾವಣೆ ಬಂದಾಗ ಮಾತ್ರ ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಇಲ್ಲಸಲ್ಲದ ಸುಳ್ಳು ಹೇಳುತ್ತಾ ಮತ ಪಡೆಯುತ್ತಾ ಬಂದಿದ್ದು ಆ ಪಕ್ಷಗಳಲ್ಲಿರುವ ನಮ್ಮ ಮುಖಂಡರಿಂದ ಹೇಳಿಕೆ ಕೊಡಿಸುತ್ತಾ ಮರಳು ಮಾಡುತ್ತಾ ಬಂದಿದ್ದಾರೆ. ಆದ್ದರಿಂದ ಸಮಾಜಿಕರು ಜಾಗೃತರಾಗಬೇಕು, ರಾಜಕಾರಣಿಗಳು ಬಂದಾಗ ಪ್ರತಿಯೊಬ್ಬರು ಪ್ರಶ್ನೆ ಕೇಳುವಂತಾಗಬೇಕು ಅಂದಾಗ ಮಾತ್ರ ಸಮಾಜವನ್ನು ಗುರ್ತಿಸುತ್ತಾರೆ. ಹೀಗಾಗಿ ಜಾಗೃತರಾಗಿ ಎಂದು ಕರೆ ನೀಡಿದರು.


ಇದಕ್ಕೂ ಮುನ್ನ ಪ್ರಮುಖ ರಸ್ತೆಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರವನ್ನು ಛತ್ರಿ ಚಾಮರಗಳೊಂದಿಗೆ ಮೆರವಣಿಗೆ ಮಾಡಲಾಯಿತು.
ಈ ವೇಳೆ ರಫೀಕ್ ಪಟೇಲ್, ಅಂಜಿನೇಯ, ಬಾಬಾಖಾನ್, ಚೆನ್ನಪ್ಪ, ನಿಂಗು, ಶಂಕ್ರಪ್ಪ, ಚಂದ್ರಪ್ಪ, ಸಿದ್ರಾಮ, ಭೀಮಪ್ಪ, ನಿಂಗಪ್ಪ, ಶಿವರಾಜ, ತಾಯಪ್ಪ, ಬಾಲರಾಜ, ಸಾಯಿಬಣ್ಣ, ಭೀಮಶೆಪ್ಪ, ಅಚಿಜಪ್ಪ, ಚಂದ್ರಶೇಖರ, ಸುರೇಶ, ವೆಂಕಟಪ್ಪ, ಬಾಲಪ್ಪ, ಬಸವರಾಜ, ಶಂಕ್ರಮ್ಮ, ಮಲ್ಲಮ್ಮ, ದೇವಮ್ಮ, ಅಮೃತಾ, ಮಾದೇವಿ, ಅನಂತಮ್ಮ, ಪೋಷಮ್ಮ, ಶಾಮಮ್ಮ, ರಾಜೇಶ್ವರ, ಸುನಿತಾ ಸೇರಿ ಅನೇಕರಿದ್ದರು.
ಬನ್ನಪ್ಪ ಸ್ವಾಗತಿಸಿದರು, ವಿಶ್ವನಾಥ ರೆಡ್ಡಿ ನಿರೂಪಿಸಿದರು. ಗೋವಿಂದ ಇಡ್ಲೂರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು