2:34 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊಲ್ಕತ್ತಾ : ಹಸೆ ಮಣೆಗೇರಿದ ಸಲಿಂಗಕಾಮಿ ಜೋಡಿ

05/07/2022, 15:43

ಕೊಲ್ಕತ್ತಾ (Reporterkarnataka.com)
ಸಲಿಂಗಕಾಮಿ ಜೋಡಿ ವಿವಾಹವಾಗಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ ಪ್ರಸಂಗ ಕೊಲ್ಕತ್ತಾದಲ್ಲಿ ನಡೆದಿದೆ.

ವಿವಾಹ ಸಮಾರಂಭದಲ್ಲಿ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು. ಅಭಿಷೇಕ್​ ರೇ ಮತ್ತು ಚೈತನ್ಯ ಶರ್ಮಾ ವಿವಾಹವಾದವರು.

ದಂಪತಿ ಅರಿಷಿಣ ಶಾಸ್ತ್ರ ಮತ್ತು ವಿವಾಹ ಸಮಾರಂಭಗಳ ಚಿತ್ರಗಳು ಮತ್ತು ವಿಡಿಯೊಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಅಭಿಷೇಕ್​ ಧೋತಿ ಮತ್ತು ಕುರ್ತಾದಲ್ಲಿ ಸಾಂಪ್ರದಾಯಿಕ ಬಂಗಾಳಿ ವರನಂತೆ ಕಾಣಿಸಿಕೊಂಡರೆ, ಚೈತನ್ಯ ಶೆರ್ವಾನಿ ಧರಿಸಿದ್ದರು. ಸಮಾರಂಭದಲ್ಲಿ ಖುಷಿ, ಸಂಭ್ರಮ ಎದ್ದು ಕಾಣಿಸಿದೆ. ಕುಟುಂಬಸ್ಥರು, ಸ್ನೇಹಿತರು ಸಡಗರದಲ್ಲಿರುವುದೂ ಸಹ ಫೋಟೋದಲ್ಲಿ ಕಾಣಿಸಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ, ಸಲಿಂಗಕಾಮಿ ದಂಪತಿ ಹೈದರಾಬಾದ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್​ ದಂಗ್​ ಹೈದ್ರಾಬಾದ್​ನ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು