9:42 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕೊಲ್ಕತ್ತಾ : ಹಸೆ ಮಣೆಗೇರಿದ ಸಲಿಂಗಕಾಮಿ ಜೋಡಿ

05/07/2022, 15:43

ಕೊಲ್ಕತ್ತಾ (Reporterkarnataka.com)
ಸಲಿಂಗಕಾಮಿ ಜೋಡಿ ವಿವಾಹವಾಗಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ ಪ್ರಸಂಗ ಕೊಲ್ಕತ್ತಾದಲ್ಲಿ ನಡೆದಿದೆ.

ವಿವಾಹ ಸಮಾರಂಭದಲ್ಲಿ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು. ಅಭಿಷೇಕ್​ ರೇ ಮತ್ತು ಚೈತನ್ಯ ಶರ್ಮಾ ವಿವಾಹವಾದವರು.

ದಂಪತಿ ಅರಿಷಿಣ ಶಾಸ್ತ್ರ ಮತ್ತು ವಿವಾಹ ಸಮಾರಂಭಗಳ ಚಿತ್ರಗಳು ಮತ್ತು ವಿಡಿಯೊಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಅಭಿಷೇಕ್​ ಧೋತಿ ಮತ್ತು ಕುರ್ತಾದಲ್ಲಿ ಸಾಂಪ್ರದಾಯಿಕ ಬಂಗಾಳಿ ವರನಂತೆ ಕಾಣಿಸಿಕೊಂಡರೆ, ಚೈತನ್ಯ ಶೆರ್ವಾನಿ ಧರಿಸಿದ್ದರು. ಸಮಾರಂಭದಲ್ಲಿ ಖುಷಿ, ಸಂಭ್ರಮ ಎದ್ದು ಕಾಣಿಸಿದೆ. ಕುಟುಂಬಸ್ಥರು, ಸ್ನೇಹಿತರು ಸಡಗರದಲ್ಲಿರುವುದೂ ಸಹ ಫೋಟೋದಲ್ಲಿ ಕಾಣಿಸಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ, ಸಲಿಂಗಕಾಮಿ ದಂಪತಿ ಹೈದರಾಬಾದ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್​ ದಂಗ್​ ಹೈದ್ರಾಬಾದ್​ನ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು