4:48 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ: ಬಿದ್ದ ಜಾಗದಿಂದ ಕೇವಲ 10 ಮೀಟರ್ ಅಂತರದಲ್ಲಿ ದೊರೆತ ಶವ

30/07/2023, 23:09

ಕುಂದಾಪುರ(reporterkarnataka.com):ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತದ ಕಲ್ಲು ಬಂಡೆಯಿಂದ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕನ ಶವ ಪತ್ತೆಯಾಗಿದೆ.
ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು ಜುಲೈ 23ರಂದು ಶರತ್ ಕುಮಾರ್ (23) ಸ್ನೇಹಿತನೊಂದಿಗೆ ಬಂದಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಕಾಲು ಜಾರಿ ನೀರಿಗೆ ಬಿದ್ದಿದ್ದರು. ಮರುಕ್ಷಣವೇ ಅವರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಹಲವು ತಂಡಗಳ ಮೂಲಕ ಶರತ್ ಹುಡುಕಾಟ ನಡೆದಿತ್ತು. ಬಿರುಸಿನ ಮಳೆ ಶೋಧ ಕಾರ್ಯಕ್ಕೆ ಅಡ್ಡಿಯಾಗಿತ್ತು.
ಇದೀಗ ಜುಲೈ 30ರಂದು ಶರತ್ ಅವರ ಮೃತದೇಹ ಅವರು ಬಂಡೆಯಿಂದ ಜಾರಿ ಬಿದ್ದ ಸ್ಥಳದಿಂದ ಕೇವಲ 10 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು