8:37 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೊರಟವರಿಗೆ ದರ್ಶನವಾದದ್ದು ಗೋವಾದಲ್ಲಿ ಬಿಕಿನಿ ತೊಟ್ಟ ವಿದೇಶಿ ಮಹಿಳೆಯರು!!

18/05/2022, 10:46

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇರಳದ ತಿರುವನಂತಪುರದಿಂದ ಕರ್ನಾಟಕದ ಕೊಲ್ಲೂರಿಗೆ ಹೊರಟ ಬಸ್ಸೊಂದು ಗೋವಾದ ಸಮುದ್ರ ಕಿನಾರೆಗೆ ತಲುಪಿದ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಾಗೆಂತ ಇದೇನೂ ಚಾಲಕ ರಹಿತ ಅತ್ಯಾಧುನಿಕ ಬಸ್ಸಲ್ಲ. ಚಾಲಕನಿರುವ ಸಾಮಾನ್ಯ ಬಸ್ ಆಗಿದೆ. ಆದರೆ ಇದೆಲ್ಲ ಎಡವಟ್ಟಿಗೆ ಮುಖ್ಯ ಕಾರಣ ಗೂಗಲ್ ಮ್ಯಾಪ್!

ಮೇ 15ರಂದು ಪ್ರಯಾಣಿಕರಿಂದ ತುಂಬಿದ್ದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ದಾರಿ ಮಧ್ಯೆಇನ್ನೊರ್ವ ಚಾಲಕ ಕರ್ತವ್ಯದ ಮೇಲೆ ಬಸ್ ಏರಿದ್ದ. ರಾತ್ರಿ ವೇಳೆಯಲ್ಲಿ ಪ್ರಯಾಣಿಕರೆಲ್ಲ ಗಡದಾಗಿ ನಿದ್ದೆ ಮಾಡಿದ್ದರು. ಬೆಳಿಗ್ಗೆ ಆಗುತ್ತಲೇ ಬಸ್ ಸಮುದ್ರ ಕಿನಾರೆಯಲ್ಲಿತ್ತು. ಯಾತ್ರಾರ್ಥಿಗಳು ಕಣ್ಣುಜ್ಜುತಾ ಕಣ್ಣು ತೆರೆದರೆ ದರ್ಶನವಾಗಿರುವುದು ಮೂಕಾಂಬಿಕೆಯಲ್ಲ. ಬದಲಿಗೆ ಬಿಕಿನಿ ತೊಟ್ಟ ತಿರುಗಾಡುತ್ತಿದ್ದ ವಿದೇಶಿ ಮಹಿಳೆಯರು.

ಕೊಲ್ಲೂರಿಗೆ ಹೊರಟ್ಟಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್ಸಿಗೆ ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ ಮಾಹಿತಿ ಇಲ್ಲದ ಚಾಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ಸನ್ನು ಚಲಾಯಿಸಿದ.

ಸೋಮವಾರ ಬೆಳಗ್ಗೆ ಬಸ್‌ನಲ್ಲಿದ್ದವರು ಎಚ್ಚೆತ್ತು ನೋಡಿದಾಗ ಬಸ್‌ ಸಮುದ್ರ ಕಿನಾರೆಯಲ್ಲಿತ್ತು. ಅರೆನಗ್ನ ವಿದೇಶೀಯರು ಓಡಾಡುತ್ತಿದ್ದರು. ಮೂಕಾಂಬಿಕೆಯ ದರ್ಶನಕ್ಕೆಂದು ಹೊರಟ ತಾವು ಗೋವೆಗೆ ತಲುಪಿದ್ದೇವೆ ಎಂಬುದು ತಿಳಿಯಿತು.

ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದರು. ಗೂಗಲ್‌ ಮ್ಯಾಪ್‌ ದಾರಿ ತಪ್ಪಿಸಿದೆ ಎಂದು ಹೇಳಿ ಚಾಲಕ ಪಾರಾಗಲು ಯತ್ನಿಸಿದ. ಬಳಿಕ ಪ್ರಯಾಣಿಕರನ್ನು ಕೊಲ್ಲೂರಿಗೆ ಕರೆದೊಯ್ದ. ದೇವರ ದರ್ಶನ ಪಡೆದ ಪ್ರಯಾಣಿಕರು ಊರಿಗೆ ವಾಪಸಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು