2:30 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೊರಟವರಿಗೆ ದರ್ಶನವಾದದ್ದು ಗೋವಾದಲ್ಲಿ ಬಿಕಿನಿ ತೊಟ್ಟ ವಿದೇಶಿ ಮಹಿಳೆಯರು!!

18/05/2022, 10:46

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇರಳದ ತಿರುವನಂತಪುರದಿಂದ ಕರ್ನಾಟಕದ ಕೊಲ್ಲೂರಿಗೆ ಹೊರಟ ಬಸ್ಸೊಂದು ಗೋವಾದ ಸಮುದ್ರ ಕಿನಾರೆಗೆ ತಲುಪಿದ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಾಗೆಂತ ಇದೇನೂ ಚಾಲಕ ರಹಿತ ಅತ್ಯಾಧುನಿಕ ಬಸ್ಸಲ್ಲ. ಚಾಲಕನಿರುವ ಸಾಮಾನ್ಯ ಬಸ್ ಆಗಿದೆ. ಆದರೆ ಇದೆಲ್ಲ ಎಡವಟ್ಟಿಗೆ ಮುಖ್ಯ ಕಾರಣ ಗೂಗಲ್ ಮ್ಯಾಪ್!

ಮೇ 15ರಂದು ಪ್ರಯಾಣಿಕರಿಂದ ತುಂಬಿದ್ದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ದಾರಿ ಮಧ್ಯೆಇನ್ನೊರ್ವ ಚಾಲಕ ಕರ್ತವ್ಯದ ಮೇಲೆ ಬಸ್ ಏರಿದ್ದ. ರಾತ್ರಿ ವೇಳೆಯಲ್ಲಿ ಪ್ರಯಾಣಿಕರೆಲ್ಲ ಗಡದಾಗಿ ನಿದ್ದೆ ಮಾಡಿದ್ದರು. ಬೆಳಿಗ್ಗೆ ಆಗುತ್ತಲೇ ಬಸ್ ಸಮುದ್ರ ಕಿನಾರೆಯಲ್ಲಿತ್ತು. ಯಾತ್ರಾರ್ಥಿಗಳು ಕಣ್ಣುಜ್ಜುತಾ ಕಣ್ಣು ತೆರೆದರೆ ದರ್ಶನವಾಗಿರುವುದು ಮೂಕಾಂಬಿಕೆಯಲ್ಲ. ಬದಲಿಗೆ ಬಿಕಿನಿ ತೊಟ್ಟ ತಿರುಗಾಡುತ್ತಿದ್ದ ವಿದೇಶಿ ಮಹಿಳೆಯರು.

ಕೊಲ್ಲೂರಿಗೆ ಹೊರಟ್ಟಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್ಸಿಗೆ ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ ಮಾಹಿತಿ ಇಲ್ಲದ ಚಾಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ಸನ್ನು ಚಲಾಯಿಸಿದ.

ಸೋಮವಾರ ಬೆಳಗ್ಗೆ ಬಸ್‌ನಲ್ಲಿದ್ದವರು ಎಚ್ಚೆತ್ತು ನೋಡಿದಾಗ ಬಸ್‌ ಸಮುದ್ರ ಕಿನಾರೆಯಲ್ಲಿತ್ತು. ಅರೆನಗ್ನ ವಿದೇಶೀಯರು ಓಡಾಡುತ್ತಿದ್ದರು. ಮೂಕಾಂಬಿಕೆಯ ದರ್ಶನಕ್ಕೆಂದು ಹೊರಟ ತಾವು ಗೋವೆಗೆ ತಲುಪಿದ್ದೇವೆ ಎಂಬುದು ತಿಳಿಯಿತು.

ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದರು. ಗೂಗಲ್‌ ಮ್ಯಾಪ್‌ ದಾರಿ ತಪ್ಪಿಸಿದೆ ಎಂದು ಹೇಳಿ ಚಾಲಕ ಪಾರಾಗಲು ಯತ್ನಿಸಿದ. ಬಳಿಕ ಪ್ರಯಾಣಿಕರನ್ನು ಕೊಲ್ಲೂರಿಗೆ ಕರೆದೊಯ್ದ. ದೇವರ ದರ್ಶನ ಪಡೆದ ಪ್ರಯಾಣಿಕರು ಊರಿಗೆ ವಾಪಸಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು