6:36 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೊರಟವರಿಗೆ ದರ್ಶನವಾದದ್ದು ಗೋವಾದಲ್ಲಿ ಬಿಕಿನಿ ತೊಟ್ಟ ವಿದೇಶಿ ಮಹಿಳೆಯರು!!

18/05/2022, 10:46

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇರಳದ ತಿರುವನಂತಪುರದಿಂದ ಕರ್ನಾಟಕದ ಕೊಲ್ಲೂರಿಗೆ ಹೊರಟ ಬಸ್ಸೊಂದು ಗೋವಾದ ಸಮುದ್ರ ಕಿನಾರೆಗೆ ತಲುಪಿದ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಾಗೆಂತ ಇದೇನೂ ಚಾಲಕ ರಹಿತ ಅತ್ಯಾಧುನಿಕ ಬಸ್ಸಲ್ಲ. ಚಾಲಕನಿರುವ ಸಾಮಾನ್ಯ ಬಸ್ ಆಗಿದೆ. ಆದರೆ ಇದೆಲ್ಲ ಎಡವಟ್ಟಿಗೆ ಮುಖ್ಯ ಕಾರಣ ಗೂಗಲ್ ಮ್ಯಾಪ್!

ಮೇ 15ರಂದು ಪ್ರಯಾಣಿಕರಿಂದ ತುಂಬಿದ್ದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ದಾರಿ ಮಧ್ಯೆಇನ್ನೊರ್ವ ಚಾಲಕ ಕರ್ತವ್ಯದ ಮೇಲೆ ಬಸ್ ಏರಿದ್ದ. ರಾತ್ರಿ ವೇಳೆಯಲ್ಲಿ ಪ್ರಯಾಣಿಕರೆಲ್ಲ ಗಡದಾಗಿ ನಿದ್ದೆ ಮಾಡಿದ್ದರು. ಬೆಳಿಗ್ಗೆ ಆಗುತ್ತಲೇ ಬಸ್ ಸಮುದ್ರ ಕಿನಾರೆಯಲ್ಲಿತ್ತು. ಯಾತ್ರಾರ್ಥಿಗಳು ಕಣ್ಣುಜ್ಜುತಾ ಕಣ್ಣು ತೆರೆದರೆ ದರ್ಶನವಾಗಿರುವುದು ಮೂಕಾಂಬಿಕೆಯಲ್ಲ. ಬದಲಿಗೆ ಬಿಕಿನಿ ತೊಟ್ಟ ತಿರುಗಾಡುತ್ತಿದ್ದ ವಿದೇಶಿ ಮಹಿಳೆಯರು.

ಕೊಲ್ಲೂರಿಗೆ ಹೊರಟ್ಟಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್ಸಿಗೆ ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ ಮಾಹಿತಿ ಇಲ್ಲದ ಚಾಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ಸನ್ನು ಚಲಾಯಿಸಿದ.

ಸೋಮವಾರ ಬೆಳಗ್ಗೆ ಬಸ್‌ನಲ್ಲಿದ್ದವರು ಎಚ್ಚೆತ್ತು ನೋಡಿದಾಗ ಬಸ್‌ ಸಮುದ್ರ ಕಿನಾರೆಯಲ್ಲಿತ್ತು. ಅರೆನಗ್ನ ವಿದೇಶೀಯರು ಓಡಾಡುತ್ತಿದ್ದರು. ಮೂಕಾಂಬಿಕೆಯ ದರ್ಶನಕ್ಕೆಂದು ಹೊರಟ ತಾವು ಗೋವೆಗೆ ತಲುಪಿದ್ದೇವೆ ಎಂಬುದು ತಿಳಿಯಿತು.

ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದರು. ಗೂಗಲ್‌ ಮ್ಯಾಪ್‌ ದಾರಿ ತಪ್ಪಿಸಿದೆ ಎಂದು ಹೇಳಿ ಚಾಲಕ ಪಾರಾಗಲು ಯತ್ನಿಸಿದ. ಬಳಿಕ ಪ್ರಯಾಣಿಕರನ್ನು ಕೊಲ್ಲೂರಿಗೆ ಕರೆದೊಯ್ದ. ದೇವರ ದರ್ಶನ ಪಡೆದ ಪ್ರಯಾಣಿಕರು ಊರಿಗೆ ವಾಪಸಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು