12:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊಲ್ನಾಡು: ವೈಜ್ಞಾನಿಕ ಹೈನುಗಾರಿಕೆ; ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ

12/12/2023, 19:54

ಮಂಗಳೂರು(reporterkarnataka.com):ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇದರ ಆಶ್ರಯದಲ್ಲಿ ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ ಲಿಮಿಟೆಡ್, ಮುಲ್ಕಿ ಇವರ ಸಹಯೋಗದೊಂದಿಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ವಿಷಯದಲ್ಲಿ ಒಂದು ದಿನದ ತರಬೇತಿ ಹಾಗೂ ರೈತರ ಸಾಮರ್ಥ್ಯಭಿವೃದ್ಧಿ ಕಾರ್ಯಕ್ರಮವನ್ನು ಮುಲ್ಕಿ ಸಮೀಪದ
ಕೊಲ್ನಾಡು ಜಂಕ್ಷನ್ ನಲ್ಲಿ ಹಮ್ಮಿಕೊಳ್ಳಲಾಯಿತು.


ಡಾ. ಶಿವಕುಮಾರ್, ಆರ್., (ಸಹಾಯಕ ಪ್ರಾದ್ಯಪಕರು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು) ಅವರು ಕಾರ್ಯಕ್ರಮದ ಸಂಯೋಜಕರಗಿದ್ದು, ತಮ್ಮ ಪ್ರವಚನದಲ್ಲಿ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ಹಾಗೂ ಸಮತೋಲನ ಆಹಾರದ ಮಹತ್ವವನ್ನು ತಿಳಿಸಿದರು. ರೈತರು ತಮ್ಮ ರಾಸುಗಳಿಗೆ ಕೇವಲ ಪಶು ಆಹಾರವನ್ನು ಕೊಡದೆ ಸರಿಯಾದ ಪ್ರಮಾಣದಲ್ಲಿ ಹಸಿರು ಮೇವು, ಒಣ ಮೇವು, ಧಾನ್ಯ ಮಿಶ್ರಣ ಹಾಗೂ ಖನಿಜ ಮಿಶ್ರಣಗಳನ್ನು ಕೊಡುವುದರಿಂದ ಹಾಲಿನಲ್ಲಿ ಕೊಬ್ಬು ಹಾಗೂ ಹಾಲಿನ ಸಾಂದ್ರತೆ ಹೆಚ್ಚಿಸಿಕೊಳ್ಳುವುದರ ಜೊತೆಗೆ ಅಧಿಕ ಹಾಲಿನ ಇಳುವರಿಯನ್ನು ಪಡೆಯಬಹುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಿಜಯ ಶೆಟ್ಟಿ, (ಅಧ್ಯಕ್ಷರು, ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ ಲಿಮಿಟೆಡ್, ಮುಲ್ಕಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು