2:06 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳ ಉದ್ಘಾಟನೆ: ಶಾಸಕ ಭರತ್ ಶೆಟ್ಟಿ ಚಾಲನೆ

24/02/2024, 19:28

ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳನ್ನು ಶನಿವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಈ ಸಂದರ್ಭ ಮಾತನಾಡಿದ ಅವರು,ಪಿಎಂಶ್ರೀ ಯೋಜನೆಯ ಫಲಾನುಭವಿ ಶಾಲೆಗಳು ಮುಖ್ಯವಾಗಿ ಲ್ಯಾಬ್‌ಗಳು, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು, ಲೈಬ್ರರಿಗಳು, ಕ್ರೀಡಾ ಉಪಕರಣಗಳು, ಕಲಾ ಕೊಠಡಿ ಇತ್ಯಾದಿಗಳನ್ನು ಒಳಗೊಂಡಂತೆ ಆಧುನಿಕ ಮೂಲಸೌಕರ್ಯಗಳೊಂದಿಗೆ ಸುಸಜ್ಜಿತವಾಗಿರುತ್ತವೆ.
ನೀರಿನ ಸಂರಕ್ಷಣೆ, ತ್ಯಾಜ್ಯ ಮರುಬಳಕೆ, ಇಂಧನ-ಸಮರ್ಥ ಮೂಲಸೌಕರ್ಯ ಮತ್ತು ಪಠ್ಯಕ್ರಮದಲ್ಲಿ ಸಾವಯವ ಜೀವನಶೈಲಿಯ ಏಕೀಕರಣದೊಂದಿಗೆ ಹಸಿರು ಶಾಲೆಗಳಾಗಿ ಅಭಿವೃದ್ಧಿಗೊಳ್ಳುತ್ತವೆ. ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಸಮಾಜದಲ್ಲಿ ಜವಾಬ್ದಾರಿ ನಿರ್ವಹಿಸಲು ಶಕ್ತಿ,ಸಾಮರ್ಥ್ಯ, ಸವಾಲು ಎದುರಿಸಲು ಪಿಎಂಶ್ರೀ ಯೋಜನೆ ನೆರವಾಗುತ್ತದೆ ಎಂದರು.
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆಯನ್ನು ಘೋಷಿಸಿದ್ದು, 14,500 ಶಾಲೆಗಳಲ್ಲಿ ಈ ಶಾಲೆಯೂ ಒಂದು‌ಎಂದು ನುಡಿದರು.
ಆವಿಷ್ಕಾರ ಆಧಾರಿತ, ಕಲಿಕಾ ಕೇಂದ್ರಿತ ಬೋಧನೆಯ ವಿಧಾನಕ್ಕೆ ಒತ್ತು ನೀಡಲಾಗಿದ್ದು ಸರ್ವಾಂಗೀಣವಾಗಿ ವಿದ್ಯಾರ್ಥಿಯ ಪ್ರತಿಭೆಯನ್ನು ಪ್ರೋತ್ಸಾಹಿಸುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ ಎಂದರು.
ಇದೇ ಸಂದರ್ಭ ಯಾವುದೇ ಕಾರಣಕ್ಕೂ ಧರ್ಮ, ರಾಜಕೀಯ ಶಾಲಾ ವಠಾರ ಸುಳಿಯದಂತೆ ಎಚ್ಚರಿಕೆ ವಹಿಸಬೇಕು. ಶಿಕ್ಷಣವೇ ಆದ್ಯತೆಯಾಗಬೇಕು ಎಂದು ಸೂಚನೆ ನೀಡಿದರು. ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ,ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಶೆಟ್ಟಿ ಮುತ್ತೂರು, ಮುತ್ತೂರು ಪಂಚಾಯತ್ ಉಪಾಧ್ಯಕ್ಷರು ಮತ್ತು ಪಂ. ಸದಸ್ಯರುಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಸ್ಥಳೀಯ ಭಾಗದ ಶಾಲಾ ಹಿತೈಷಿಗಳು,ಶಾಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು