4:02 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳ ಉದ್ಘಾಟನೆ: ಶಾಸಕ ಭರತ್ ಶೆಟ್ಟಿ ಚಾಲನೆ

24/02/2024, 19:28

ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳನ್ನು ಶನಿವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಈ ಸಂದರ್ಭ ಮಾತನಾಡಿದ ಅವರು,ಪಿಎಂಶ್ರೀ ಯೋಜನೆಯ ಫಲಾನುಭವಿ ಶಾಲೆಗಳು ಮುಖ್ಯವಾಗಿ ಲ್ಯಾಬ್‌ಗಳು, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು, ಲೈಬ್ರರಿಗಳು, ಕ್ರೀಡಾ ಉಪಕರಣಗಳು, ಕಲಾ ಕೊಠಡಿ ಇತ್ಯಾದಿಗಳನ್ನು ಒಳಗೊಂಡಂತೆ ಆಧುನಿಕ ಮೂಲಸೌಕರ್ಯಗಳೊಂದಿಗೆ ಸುಸಜ್ಜಿತವಾಗಿರುತ್ತವೆ.
ನೀರಿನ ಸಂರಕ್ಷಣೆ, ತ್ಯಾಜ್ಯ ಮರುಬಳಕೆ, ಇಂಧನ-ಸಮರ್ಥ ಮೂಲಸೌಕರ್ಯ ಮತ್ತು ಪಠ್ಯಕ್ರಮದಲ್ಲಿ ಸಾವಯವ ಜೀವನಶೈಲಿಯ ಏಕೀಕರಣದೊಂದಿಗೆ ಹಸಿರು ಶಾಲೆಗಳಾಗಿ ಅಭಿವೃದ್ಧಿಗೊಳ್ಳುತ್ತವೆ. ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಸಮಾಜದಲ್ಲಿ ಜವಾಬ್ದಾರಿ ನಿರ್ವಹಿಸಲು ಶಕ್ತಿ,ಸಾಮರ್ಥ್ಯ, ಸವಾಲು ಎದುರಿಸಲು ಪಿಎಂಶ್ರೀ ಯೋಜನೆ ನೆರವಾಗುತ್ತದೆ ಎಂದರು.
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆಯನ್ನು ಘೋಷಿಸಿದ್ದು, 14,500 ಶಾಲೆಗಳಲ್ಲಿ ಈ ಶಾಲೆಯೂ ಒಂದು‌ಎಂದು ನುಡಿದರು.
ಆವಿಷ್ಕಾರ ಆಧಾರಿತ, ಕಲಿಕಾ ಕೇಂದ್ರಿತ ಬೋಧನೆಯ ವಿಧಾನಕ್ಕೆ ಒತ್ತು ನೀಡಲಾಗಿದ್ದು ಸರ್ವಾಂಗೀಣವಾಗಿ ವಿದ್ಯಾರ್ಥಿಯ ಪ್ರತಿಭೆಯನ್ನು ಪ್ರೋತ್ಸಾಹಿಸುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ ಎಂದರು.
ಇದೇ ಸಂದರ್ಭ ಯಾವುದೇ ಕಾರಣಕ್ಕೂ ಧರ್ಮ, ರಾಜಕೀಯ ಶಾಲಾ ವಠಾರ ಸುಳಿಯದಂತೆ ಎಚ್ಚರಿಕೆ ವಹಿಸಬೇಕು. ಶಿಕ್ಷಣವೇ ಆದ್ಯತೆಯಾಗಬೇಕು ಎಂದು ಸೂಚನೆ ನೀಡಿದರು. ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ,ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಶೆಟ್ಟಿ ಮುತ್ತೂರು, ಮುತ್ತೂರು ಪಂಚಾಯತ್ ಉಪಾಧ್ಯಕ್ಷರು ಮತ್ತು ಪಂ. ಸದಸ್ಯರುಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಸ್ಥಳೀಯ ಭಾಗದ ಶಾಲಾ ಹಿತೈಷಿಗಳು,ಶಾಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು