9:10 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬೃಹತ್ ರೋಡ್ ಶೋ: ಭಾರೀ ಜನಸ್ತೋಮ

21/04/2024, 23:30

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಲ್ಯ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ,ರಾಣಿ ಅಬ್ಬಕ್ಕ ವೃತ್ತದವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬೃಹತ್ ರೋಡ್ ಶೋ ನಡೆಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಪದ್ಮರಾಜ್ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವವನ್ನು ಮರಳಿ ಬರುವುದು ನಿಶ್ಚಿತ ಎಂದು ಹೇಳಿದರು.
ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.
ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
ಇಫ್ತಿಕರ್ ಆಲಿ, ಮಾಜಿ ಕೇಂದ್ರ ವೀರಪ್ಪ ಮೊಲಿ,ದ.ಕ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು