8:59 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೋಮು ಪ್ರಚೋದನೆ ಆರೋಪ: ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು

08/10/2021, 16:10

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಎಂಬವರ ಮೇಲೆ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಮಾವೇಶದಲ್ಲಿ ಚೈತ್ರಾ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು ಎಂದು ರಾಜ್ಯ ಕಾಂಗ್ರೆಸ್ ಸಂಯೋಜಕ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಚೈತ್ರಾ ಕುಂದಾಪುರ ಮತ್ತು ಕಾರ್ಯಕ್ರಮ ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.
ಕೋಟಿ ಚೆನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ ಎಂದು ಚಿತ್ತರಂಜನ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು