8:32 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಕೋಮುವಾದ ಪ್ರಕರಣ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಿ ಶೀಘ್ರ ನ್ಯಾಯ ಕೊಡಿಸಿ: ನ್ಯಾಯವಾದಿ ಪದ್ಮರಾಜ್ 

28/07/2022, 20:26

ಮಂಗಳೂರು(reporterkarnataka.com): ರಾಜ್ಯ ಸರಕಾರಕ್ಕೆ ಇಚ್ಛಾಶಕ್ತಿಯಿದ್ದರೆ ಪ್ರವೀಣ್ ಕೊಲೆ ಪ್ರಕರಣ ಸೇರಿ ಸಮಾಜದಲ್ಲಿ ಶಾಂತಿ ಕದಡುವ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ 6 ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ‌ ಕೈಗೊಳ್ಳಲಿ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಬಿಲ್ಲವ ಮುಖಂಡ, ವಕೀಲ ಪದ್ಮರಾಜ್  ಆರ್. ಆಗ್ರಹಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಸರ್ಕಾರದ ಭದ್ರತಾ ವೈಫಲ್ಯತೆ ಎದ್ದು ಕಾಣುತ್ತಿದೆ. ಕೆಲವು ದಿನಗಳ ಹಿಂದೆ, ಮಾಧ್ಯಮಗಳು ಪ್ರತೀಕಾರದ ಕೊಲೆ ನಡೆಯಬಹುದು ಎಂದು ಸಂಶಯ ವ್ಯಕ್ತಪಡಿಸಿ, ಸರ್ಕಾರವನ್ನು ಎಚ್ಚರಿಸಿದರೂ ಏನೂ ಕ್ರಮ ಕೈಗೊಳ್ಳದ ಗುಪ್ತಚರ ಇಲಾಖೆಯ ವಿಫಲತೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

ಯಾರದ್ದೋ ಸ್ವಾರ್ಥಕ್ಕಾಗಿ ಬಲಿಯಾಗುವವರು ಯಾವ ರಾಜಕಾರಣಿಯ ಮಗನೂ ಅಲ್ಲ. ಬಡಕುಟುಂಬದ ಯುವಕ. ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇದೀಗ ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಯಾರು ಜವಾಬ್ದಾರಿ? ಹೃದ್ರೋಗಪೀಡಿತ ಅಪ್ಪ, ವಯಸ್ಸಾದ ತಾಯಿ, ಮೂರು ವರ್ಷಗಳ ಹಿಂದೆ ಮದುವೆಯಾದ ಹೆಂಡತಿಗೆ ಆಧಾರಸ್ತಂಭವಾಗಿದ್ದ ಅವರ ನಿಧನದಿಂದ ಆ ಕುಟುಂಬ ಮತ್ತಷ್ಟು ಕಷ್ಟದ ಕೂಪಕ್ಕೆ ಹೋಗಿದೆ. ತಮ್ಮ ಸ್ವಾರ್ಥಕ್ಕಾಗಿ ದುಡಿಸಿಕೊಳ್ಳುವ ರಾಜಕಾರಣಿಗಳು ಪರಿಹಾರ ಘೋಷಣೆ ಮಾಡಬಹುದು. ಆದರೆ ಹೋದ ಪ್ರಾಣವನ್ನು ಮರಳಿ ಪಡೆಯಲು ಸಾಧ್ಯವೇ? ಒಂದು ಕೊಲೆಯಾದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎನ್ನುವ ರಾಗವೊಂದು ಬಿಟ್ಟರೆ, ಇಲ್ಲಿಯವರೆಗೆ ಏನು ಕ್ರಮ ಕೈಗೊಂಡಿದ್ದಾರೆ? ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಶ್ರಮಜೀವಿಗಳ ಕುಟುಂಬದ ಮಕ್ಕಳೇ ಬಲಿಯಾಗುತ್ತಿದ್ದಾರೆ. ಒಂದು ವೇಳೆ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಪ್ರವೀಣನಂತಹ ಸಹೃದಯಿಯನ್ನು ಕಳೆದುಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಪ್ರವೀಣ್ ಕುಟುಂಬದ ದು‌ಃಖದ ಸಮಯದಲ್ಲಿ ಬಿಲ್ಲವ ಸಮಾಜ  ಸದಾ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು