12:37 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕೋಮುವಾದಿ ಬಿಜೆಪಿ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ: ಸಚಿವ ಡಾ ಎಚ್. ಸಿ. ಮಹದೇವಪ್ಪ

04/04/2024, 02:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗಾಗಿ ಕೋಮುವಾದಿ ಹಾಗೂ ಮತೀಯವಾದಿ ಬಿಜೆಪಿಯನ್ನು ಸೋಲಿಸುವ ಮೂಲಕ ಬಿಜೆಪಿಯನ್ನು ದೂರವಿಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್. ಸಿ. ಮಹದೇವಪ್ಪ ಹೇಳಿದರು.
ನಂಜನಗೂಡು


ತಾಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಡಾ ಮಹದೇವಪ್ಪ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸಿ ದಿವಂಗತ ಧೃವ ನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ನಂಜನಗೂಡಿನಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಯಾವುದೇ ಭಿನ್ನಮತವಿಲ್ಲದೆ ಒಗ್ಗಟ್ಟಿನಿಂದ ಶಾಸಕ ದರ್ಶನ್ ದ್ರುವನಾರಾಯಣ್ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಹೆಚ್ಚಿನ ಮತ ಕೊಡಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ. ಇದಕ್ಕೆ ನನ್ನ ಮತ್ತು ಸಿಎಂ ಸಿದ್ದರಾಮಯ್ಯನವರ ಸಂಪೂರ್ಣ ಬೆಂಬಲವಿದೆ ಎಂದು ಪುತ್ರ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ನಮ್ಮ ಜನಪ್ರಿಯ ಮುಖ್ಯಮಂತ್ರಿಗಳು ಈ ಸಾಲಿನ ಬಜೆಟ್ ನಲ್ಲಿ ಮೈಸೂರು ನಂಜನಗೂಡು ಚಾಮರಾಜನಗರ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಿದ್ದಾರೆ ಅಲ್ಲದೆ ಚುನಾವಣೆಗೆ ಮುನ್ನ ಭರವಸೆ ನೀಡಿದ್ದ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದ ಸರ್ಕಾರವಾಗಿದೆ. ಹಾಗಾಗಿ ನಮ್ಮ ಕಾರ್ಯಕರ್ತ, ಮುಖಂಡರು ಇದನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ಪಕ್ಷದ ಹೈಕಮಾಂಡ್ ಮತ್ತು ನಮ್ಮ ವರಿಷ್ಠರು ಈ ಚುನಾವಣೆಯಲ್ಲಿ ನನಗೊಂದು ಅವಕಾಶ ನೀಡಿದ್ದಾರೆ ಹಾಗಾಗಿ ನುಡಿದಂತೆ ನಡೆಯದ ಬಿಜೆಪಿ ಪಕ್ಷವನ್ನು ದೂರವಿಟ್ಟು ನುಡಿದಂತೆ ನಡೆದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಪಕ್ಷದ ಕೈ ಬಲಪಡಿಸುವ ಉದ್ದೇಶದಿಂದ ಈ ಬಾರಿ ನನ್ನನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಪಕ್ಷದ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕರಿಗೆ ಹಾಗೂ ಅಭ್ಯರ್ಥಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಡಾ , ಯತೀಂದ್ರ ಸಿದ್ದರಾಮಯ್ಯ, ಶಾಸಕರುಗಳಾದ ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು, ಮಾಜಿ ಶಾಸಕರುಗಳಾದ ಕಳಲೆ ಕೇಶವಮೂರ್ತಿ, ಭಾರತೀ ಶಂಕರ್ ನಂಜುಂಡಸ್ವಾಮಿ, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ಸಿ ಬಸವರಾಜ್, ನಂಜನಗೂಡಿನ ಉಸ್ತುವಾರಿಗಳಾದ ಶ್ರೀಕಂಠು, ಸೋಮೇಶ್ ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಟ್ಟಿ, ಮಹೇಶ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದ ಶೆಟ್ಟಿ, ಮುಖಂಡರಾದ ಇಂದನ್ ಬಾಬು, ಬುಲೆಟ್ ಮಹಾದೇವಪ್ಪ, ಕಳಲೆ ಮಹೇಶ್, ನಾಗೇಶ್ ರಾಜ್, ಗಿರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು