2:31 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಕೊಣಾಜೆ ಪೊಲೀಸರ ಭಾರೀ ಕಾರ್ಯಾಚರಣೆ: 3 ಲಕ್ಷ ರೂ. ಮೌಲ್ಯದ ಗಾಂಜಾ ವಶ; 4 ಮಂದಿ ಬಂಧನ

26/12/2022, 21:54

ಮಂಗಳೂರು(reporterkarnataka.com): ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಸುಮಾರು 3 ಲಕ್ಷ ಮೌಲ್ಯದ ಗಾಂಜಾವನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದು,
ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ಕೊಣಾಜೆ ಪೊಲೀಸರು ಚೇಳೂರು ಚೆಕ್ ಪೋಸ್ಟ್ ನಲ್ಲಿ ಅಡ್ಡಗಟ್ಟಿ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಸರಗೋಡು ಬಂದ್ಯೋಡಿನ ಮಹಮ್ಮದ್ ನೌಫಾಲ್ (24), ಮಲಪುರಂ ಪೊನ್ನಾಣಿಯ ಜಂಶೀರ್ ಎಂ.(27), ಮಂಜೇಶ್ವರ ಮಂಗಲ್ಪಾಡಿಯ ಮಹಮ್ಮದ್ ಬಾತೀಶ್ (37) ಹಾಗೂ ಕಾಸರಗೋಡು ಮುಟ್ಟತೋಡಿ ಮಹಮ್ಮದ್ ಅಶ್ರಫ್ (42) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ ಉಪ್ಪಿನಂಗಡಿ, ಮೆಲ್ಕಾರ್, ಬೋಳಿಯಾರು ಮಾರ್ಗವಾಗಿ ಕೇರಳ ಕಡೆಗೆ ಕಾರಿನಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯವನ್ನು ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಪಡೆದುಕೊಂಡು ಚೇಳೂರು ಪೊಲೀಸ್ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ.

3,19,000 ಬೆಲೆಬಾಳುವ 32,195 ಕೆ.ಜಿ ಗಾಂಜಾ, ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಮತ್ತು ಖರೀದಿಸಲು ಉಪಯೋಗಿಸಿದ ರೂ.13,000 ಮೌಲ್ಯದ 4 ಮೊಬೈಲ್ ಫೋನ್ ಹಾಗೂ ಗಾಂಜಾ ತುಂಬಿಕೊಂಡು ಬರಲು ಬಳಸಿದ ಎರಡು ಟ್ರಾವೆಲ್ ಬ್ಯಾಗ್ ಸೇರಿದಂತೆ ರೂ.3 ಲಕ್ಷ ಮೌಲ್ಯದ ಆಲ್ಟ್ ಕಾರು ಒಟ್ಟು ರೂ.6,32,000 ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಕೊಣಾಜೆ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪಿ.ಎಸ್ ಐ ಶರಣಪ್ಪ ಭಂಡಾರಿ, ಸಿಬ್ಬಂದಿ ಶೈಲೇಂದ್ರ, ಮಹಮ್ಮದ್ ಶರೀಫ್, ಮಹಮ್ಮದ್ ಶರೀಫ್, ಮಹೇಶ್, ಪುರುಷೋತ್ತಮ, ದೀಪಕ್, ಅಶ್ವಿನ್, ಸುರೇಶ್, ಅಂಬರೀಶ್, ಬರಮ್ ಬಡಿಗೇರ್, ರೇಷ್ಮಾ, ಸುನಿತಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಆರೋಪಿಗಳೆಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು