2:30 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಕೊನೆಗೂ ಕೂಡಿ ಬಂದ ಮುಹೂರ್ತ: ಮಸ್ಕಿ  ಹಾಗೂ ಬಸವಕಲ್ಯಾಣ ನೂತನ ಶಾಸಕರ ಪ್ರಮಾಣ ವಚನಕ್ಕೆ ದಿನ ಫಿಕ್ಸ್ 

07/06/2021, 17:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಂಗ 

info.reporterkarnataka@gmail.com

ಕೊರೊನಾ ವೇಳೆ ನಡೆದ ವಿಧಾನಸಭೆ  ಉಪ ಚುನಾವಣೆಯಲ್ಲಿ ಜಯದ ಹಾರ ಕೊರಳಿಗೇರಿಸಿಕೊಂಡ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ನ

ನೂತನ ಶಾಸಕ ಬಸವನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಕೊನೆಗೂ ಕೂಡಿ ಬಂದಿದೆ. ಜೂನ್ 8ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಕೊರೊನಾ ಲಾಕ್ ಡೌನ್ ಇರುವುದರಿಂದ ಮಸ್ಕಿ ಹಾಗೂ ಬಸವಕಲ್ಯಾಣದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರವನ್ನು ಮುಂದೂಡಲಾಗಿತ್ತು. ಇದೀಗ ಮಸ್ಕಿ ಕ್ಷೇತ್ರದ ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣ ನೂತನ ಶಾಸಕ ಶರಣು ಸಲಗರ್ ಅವರ ಪ್ರಮಾಣ ವಚನದ ದಿನಾಂಕವನ್ನು ವಿಧಾನಸಭೆ ಸ್ಪೀಕರ್ ನಿಗದಿಪಡಿಸಿದ್ದಾರೆ.

ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೇ ಮಹಡಿ ಸಭಾಂಗಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು