8:49 PM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಗಾಯನ, ಕವಿತಾ ವಾಚನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

25/08/2025, 19:35

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲಾಯಿತು.
ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಮಾತೃ ಭಾಷೆಯವರು ತಮ್ಮ ಮನೆಗಳಲ್ಲಿ ಕೊಂಕಣಿಯಲ್ಲಿಯೇ ಮಾತನಾಡುವ ಮೂಲಕ ಈ ಭಾಷೆಯನ್ನು ಉಳಿಸಿ ಬೆಳೆಸಲು ಮುಂದಾಗ ಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ ಅವರು ಮಾತನಾಡಿ ಕೊಂಕಣಿ ಮಾನ್ಯತೆ ಲಭಿಸಿದ ಕುರಿತಂತೆ ಮಾಹಿತಿ ನೀಡಿ ನಮ್ಮ ಮಾತೃ ಭಾಷೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ದಾಟಿಸಲು ಎಲ್ಲರೂ ಮುಂದಾಗ ಬೇಕು ಎಂದು ಸಲಹೆ ಮಾಡಿದರು.
ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಸ್ವಾಗತಿಸಿದರು.
ಕೊಂಕಣಿ ಮಾನ್ಯತಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಗಾಯನ ಮತ್ತು ಕವಿತಾ ವಾಚನ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಕುರಿತಂತೆ ವಿಶಿಷ್ಟ ರೀತಿಯ ಸೇವೆ ಸಲ್ಲಿಸಿದ ಚರ್ಚಿನ ಸದಸ್ಯ ಚಾರ್ಲ್ಸ್ ಫೆರ್ನಾಂಡಿಸ್ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಚರ್ಚ್ ನ ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಎರಡು ಕಾನ್ವೆಂಟ್ ಗಳ ಸುಪೀರಿಯರ್ ಗಳಾದ ಸಿ. ಮೊಂತಿ ಮತ್ತು ಸಿ. ವಿಭಾ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ ಉಪಸ್ಥಿತರಿದ್ದರು.
ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ವಂದಿಸಿದರು. ರೋಶನ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು