6:20 PM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು