2:32 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು