1:30 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು