8:29 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು