5:20 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು; ವನ್ಯ ಜೀವಿಗಳನ್ನು ರಕ್ಷಿಸುವಂತೆ ‘ವಂದೇ ಮಾತರಂ’ ಒತ್ತಾಯ

22/08/2021, 10:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಆ 21ರಂದು ತಡರಾತ್ರಿ ಕರಡಿ ಸಾವನ್ನಪ್ಪಿದೆ. ವಾಯು ವಿಹಾರಕ್ಕೆ ತೆರಳಿದ್ದ ನಾಗರೀಕರು ರಸ್ತೆ ಬದಿ ಕರಡಿ ಮೃತಪಟ್ಟಿರುವುದನ್ನು,ಅರಣ್ಯ ಇಲಾಖಾಧಿಕಾರಿಗೆ ತಿಳಿಸಿದ್ದು, ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಕರಡಿ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಮಧ್ಯರಾತ್ರಿ ಕರಡಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರಬಹುದೆಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಮೂರು ನಾಲ್ಕು ವರ್ಷದ ಕರಡಿ ಇದಾಗಿ ಎನ್ನಲಾಗಿದೆ. ವರ್ಷದ ಹಿಂದೆಯಷ್ಟೇ ಇದೇ ರಸ್ತೆಯ ಒಂದು ಕಿಲೋ ಮೀಟರ್ ಅಂತರದಲ್ಲಿ ಕರಡಿಯೊಂದು ಇದೇ ತರನಾಗಿ ಮೃತಪಟ್ಟಿತ್ತು. ರಾಷ್ಟ್ರೀಯ ಹೆದ್ದಾರಿ ರಸ್ತೆ ದಾಟುವಾಗ ವನ್ಯ ಪ್ರಾಣಿಗಳು ಮೃಗಗಳು ಬಲಿಯಾಗುವುದು ಸಹಜ. ಅವುಗಳು ಮಾನವನ ನೆಮ್ಮದಿ ಹಾಳು ಮಾಡದಂತೆ ತಡೆಯಲು ಮತ್ತು ಅವುಗಳು ಹೀಗೆ ನಶಿಸದಂತೆ ಕಾಪಾಡಲು ಅವುಗಳನ್ನು ಸೂಕ್ತ ಸ್ಥಳಕ್ಕೆ ವರ್ಗಹಿಸಬೇಕಿದೆ.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶೀಘ್ರವೇ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ವಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ತಾಲೂಕು ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ಕರಡಿಗಳು ಮತ್ತು ಚಿರತೆಗಳು ಇರುವಿಕೆ ಸಾಬೀತಾಗಿದೆ ಅವು ಮನುಷ್ಯನಿಗೆ ಹಾನಿ ಮಾಡುವ ಮೊದಲು ಮತ್ತು ಹೀಗೆ ಪ್ರಾಣ ಕಳೆದುಕೊಳ್ಳುವ ಮೊದಲು, ಮಾನವನ ನೆಮ್ಮದಿಗಾಗಿ ಅವುಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಬೇಕಿದೆ ಎನ್ನುತ್ತಾರೆ ನಾಗರೀಕರು.

ಇತ್ತೀಚಿನ ಸುದ್ದಿ

ಜಾಹೀರಾತು