1:10 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು; ವನ್ಯ ಜೀವಿಗಳನ್ನು ರಕ್ಷಿಸುವಂತೆ ‘ವಂದೇ ಮಾತರಂ’ ಒತ್ತಾಯ

22/08/2021, 10:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಆ 21ರಂದು ತಡರಾತ್ರಿ ಕರಡಿ ಸಾವನ್ನಪ್ಪಿದೆ. ವಾಯು ವಿಹಾರಕ್ಕೆ ತೆರಳಿದ್ದ ನಾಗರೀಕರು ರಸ್ತೆ ಬದಿ ಕರಡಿ ಮೃತಪಟ್ಟಿರುವುದನ್ನು,ಅರಣ್ಯ ಇಲಾಖಾಧಿಕಾರಿಗೆ ತಿಳಿಸಿದ್ದು, ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಕರಡಿ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಮಧ್ಯರಾತ್ರಿ ಕರಡಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರಬಹುದೆಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಮೂರು ನಾಲ್ಕು ವರ್ಷದ ಕರಡಿ ಇದಾಗಿ ಎನ್ನಲಾಗಿದೆ. ವರ್ಷದ ಹಿಂದೆಯಷ್ಟೇ ಇದೇ ರಸ್ತೆಯ ಒಂದು ಕಿಲೋ ಮೀಟರ್ ಅಂತರದಲ್ಲಿ ಕರಡಿಯೊಂದು ಇದೇ ತರನಾಗಿ ಮೃತಪಟ್ಟಿತ್ತು. ರಾಷ್ಟ್ರೀಯ ಹೆದ್ದಾರಿ ರಸ್ತೆ ದಾಟುವಾಗ ವನ್ಯ ಪ್ರಾಣಿಗಳು ಮೃಗಗಳು ಬಲಿಯಾಗುವುದು ಸಹಜ. ಅವುಗಳು ಮಾನವನ ನೆಮ್ಮದಿ ಹಾಳು ಮಾಡದಂತೆ ತಡೆಯಲು ಮತ್ತು ಅವುಗಳು ಹೀಗೆ ನಶಿಸದಂತೆ ಕಾಪಾಡಲು ಅವುಗಳನ್ನು ಸೂಕ್ತ ಸ್ಥಳಕ್ಕೆ ವರ್ಗಹಿಸಬೇಕಿದೆ.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶೀಘ್ರವೇ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ವಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ತಾಲೂಕು ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ಕರಡಿಗಳು ಮತ್ತು ಚಿರತೆಗಳು ಇರುವಿಕೆ ಸಾಬೀತಾಗಿದೆ ಅವು ಮನುಷ್ಯನಿಗೆ ಹಾನಿ ಮಾಡುವ ಮೊದಲು ಮತ್ತು ಹೀಗೆ ಪ್ರಾಣ ಕಳೆದುಕೊಳ್ಳುವ ಮೊದಲು, ಮಾನವನ ನೆಮ್ಮದಿಗಾಗಿ ಅವುಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಬೇಕಿದೆ ಎನ್ನುತ್ತಾರೆ ನಾಗರೀಕರು.

ಇತ್ತೀಚಿನ ಸುದ್ದಿ

ಜಾಹೀರಾತು