1:53 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ

13/12/2021, 16:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.conlm 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭಿಸಿದರು. ತಮ್ಮ ಸಾಮಾನ್ಯ ಪೆರೇಡ್ ಗಳನ್ನು ಪ್ರಸ್ತುತಪಡಿಸಿದರು ಹಾಗೂ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು.

ಸಸಂಪಪೂ ಕಾಲೇಜ್ ಮುಖ್ಯೋಪಾಧ್ಯಾಯ ಮಾರಪ್ಪ, ಗೃಹರಕ್ಷಕ ದಳದ ಪಥ ಸಂಚಲನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಗೃಹ ರಕ್ಷಕ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗಿಯ‍ಾಗಿದ್ದರು. ತಮ್ಮ ಆಕರ್ಷಕ ಪಥ ಸಂಚಲನ  ನಡೆಸಿದ ಗೃಹರಕ್ಷಕರು, ದಿನಾಚರಣೆ ಪ್ರಯುಕ್ತ ಪಟ್ಟಣದ ಪ್ರಮುಖ ವೃತ್ತ ಹಾಗೂ ರಸ್ಥೆಗಳಲ್ಲಿ ಸಂಚರಿಸಿದರು, ಈ ಮೂಲಕ ದಿನಾಚರಣೆಯ ಉತ್ಸಾಹವನ್ನು  ಹಾಗೂ ಸಂತೋಷವನ್ನು ನಾಗರೀಕರಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು