9:52 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ

13/12/2021, 16:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.conlm 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭಿಸಿದರು. ತಮ್ಮ ಸಾಮಾನ್ಯ ಪೆರೇಡ್ ಗಳನ್ನು ಪ್ರಸ್ತುತಪಡಿಸಿದರು ಹಾಗೂ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು.

ಸಸಂಪಪೂ ಕಾಲೇಜ್ ಮುಖ್ಯೋಪಾಧ್ಯಾಯ ಮಾರಪ್ಪ, ಗೃಹರಕ್ಷಕ ದಳದ ಪಥ ಸಂಚಲನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಗೃಹ ರಕ್ಷಕ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗಿಯ‍ಾಗಿದ್ದರು. ತಮ್ಮ ಆಕರ್ಷಕ ಪಥ ಸಂಚಲನ  ನಡೆಸಿದ ಗೃಹರಕ್ಷಕರು, ದಿನಾಚರಣೆ ಪ್ರಯುಕ್ತ ಪಟ್ಟಣದ ಪ್ರಮುಖ ವೃತ್ತ ಹಾಗೂ ರಸ್ಥೆಗಳಲ್ಲಿ ಸಂಚರಿಸಿದರು, ಈ ಮೂಲಕ ದಿನಾಚರಣೆಯ ಉತ್ಸಾಹವನ್ನು  ಹಾಗೂ ಸಂತೋಷವನ್ನು ನಾಗರೀಕರಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು