7:24 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ

13/11/2021, 11:03

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡಿದ್ದಾರೆ.

ಶ್ರೀಊರಮ್ಮ ದೇವಿಯ ಸನ್ನಿದಾನದಲ್ಲಿ ತಮ್ಮ ಕುಟುಂಬ ಸದಸ್ಯರೊಡಗೂಡಿ ದೇವಸ್ಥಾನದ ಸನ್ನಿದಾನದಲ್ಲಿ ಸಮಿತಿಯ ಪ್ರಮುಖರಿಗೆ ಹಣ ಸಂದಾಯ ಮಾಡಿದ್ದಾರೆ. ದೈವಜ್ಞರಾದ ಹಿ.ಮ.ಚಿದಾನಂದ ಸ್ವಾಮಿರವರ ನೇತೃತ್ವದಲ್ಲಿ ದೇವಸ್ಥಾನದ ದೈವಸ್ಥರು ದೇಣಿಗೆ ಹಣ ಸ್ವೀಕರಿಸಿದ್ದಾರೆ. ದೇಣಿಗೆ ಹಣ ನೀಡಿದ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣ ಹಾಗೂ ಅವರ ಕುಟುಂಬಕ್ಕೆ, ಶ್ರೀಊರಮ್ಮ ದೇವಿ ಶುಭವನ್ನುಂಟು ಮಾಡಲೆಂದು  ಶ್ರೀಊರಮ್ಮ ದೇವಿಯಲ್ಲಿ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ದೈವಸ್ಥರು ತಿಪ್ಪಣ್ಣನವರನ್ನು ಅಭಿನಂದಿಸಿದ್ದಾರೆ. ಶ್ರೀಊರಮ್ಮ ದೇವಿ ದೇವಸ್ಥಾನದ ಸಮತಿಯ ಪ್ರಮುಖರು, ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು