6:05 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ

13/09/2021, 10:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ.

ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಶ್ರೀಗಣೇಶೋತ್ಸವ ಆಚರಿಸಲಾಗಿತು.

ಮಹಿಳೆಯರು ಹಾಗೂ ವೃದ್ಧರ ನೆರವಿನೊಂದಿಗೆ ಬ‍ಾಲಕರು ಸಹಜವಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. 

ಕೂಡ್ಲಿಗಿ ಪಟ್ಟಣದ ನಾಗರೀಕ ಹಿತರಕ್ಷಣ ವೇದಿಕೆಯಿಂದ ಪ್ರತಿಷ್ಠಾಪಿಸಿರುವ  ಶ್ರೀಗಣೇಶನನ್ನು. ಕೋವಿಡ್ ನಿಯಮದಂತೆ  ಸಾಮೂಹಿಕ ಸರಳ ಗಣೇಶೋತ್ಸವ ಆಚರಿಸಲ‍ಾಯಿತ. ನಾಗರೀಕ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು  ಹಾಗೂ ಹಿರಿಯ ನಾಗರೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ ಪ್ರತಿಷ್ಠಾಪಿಸಲಾಗಿತ್ತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್ ನಿಯಮ ಪಾಲನೆ ಕಡ್ಡಾಯ ಜಾರಿ ಹಿನ್ನಲೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಆಚರಿಸುವ ಡ್ಯಾನ್ಸ್ ಹಾಗೂ ಸಾಂಸ್ಕೃತಿಕ ಆಚರನೆಣೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಸಾಂಪ್ರದಾಯಿಕ ಮೂರು ದಿನಗಳ ಉತ್ಸವಕ್ಕೆ ತಾಲೂಕಿನೆಲ್ಲೆಡೆ ಸೆ12ರಂದು ತೆರೆಬಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು