7:43 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೂರಾಡಿ: ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ; ಒಡನಾಡಿಗಳಿಂದ ಅಂತಿಮ ನಮನ

02/07/2023, 20:58

ಬ್ರಹ್ಮಾವರ(reporterkarnataka.com): ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದ ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅವರ ಅಂತ್ಯಕ್ರಿಯೆ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು.

ಪಟ್ಟಾಭಿರಾಮ ಸೋಮಯಾಜಿ ಅವರ ಸಹೋದರಿ ಅನಸೂಯ ಕಲ್ಕೂರ ಅವರ ಮನೆಯ‌ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಟ್ಟಾಭಿಯವರ ಒಡನಾಡಿಗಳಾದ ಪ್ರೊ. ಕೆ. ಪಣಿರಾಜ್, ಕೆ.ಎಲ್. ಅಶೋಕ್, ಉಮರ್ ಯು.ಹೆಚ್., ಕಲ್ಕುಳಿ ವಿಠಲ ಹೆಗಡೆ, ರಾಘವೇಂದ್ರ ಚಾರ್ವಾಕ, ಇದ್ರೀಸ್ ಹೂಡೆ, ಹುಸೈನ್ ಕೋಡಿಬೆಂಗ್ರೆ, ಇರ್ಶಾದುಲ್ಲಾಹ್ ಆದಿಲ್, ಡಾ. ಹಯವದನ ಉಪಾಧ್ಯಾಯ, ಶಾಮರಾಜ್ ಬಿರ್ತಿ, ಶಾರದಾ ಮೂಡುಸಗ್ರಿ, ಜಿ. ವಿಷ್ಣು, ಹಸೀನಾ ಬಾನು, ಶಿವಕುಮಾರ್ ಗುಳಘಟ್ಟ, ಬಾಬು ರಾಜ್, ವಿನ್ಸೆಂಟ್ ಆಳ್ವ, ವಿಕ್ಟರ್ ವಾಝ್, ಲಕ್ಷ್ಮಣ್ ಮತ್ತಿತರರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
ಪಟ್ಟಾಭಿರಾಮ ಸೋಮಯಾಜಿ ಸಹೋದರಿ ಅನಸೂಯ ಕಲ್ಕೂರ, ಸಹೋದರಿ ಪುತ್ರ ಅಂಬರೀಷ್ ಕಲ್ಕೂರ, ಅಣ್ಣ ರಂಗನಾಥ್ ಸೋಮಯಾಜಿ, ಅತ್ತೆ ನಿವೇದಿತಾ ಹಾಗೂ ಕುಟುಂಬದ ಸದಸ್ಯರು ಮತ್ತು ನೆರೆಮನೆಯವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು