4:22 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ

20/03/2022, 09:55

ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ  ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತಾನಾಡಿದ ತ್ರಿವರ್ಣ ಧ್ವಜ ಹಾರಿಸಲು ಪರೋಕ್ಷವಾಗಿ  ಪ್ರತ್ಯಕ್ಷವಾಗಿ ಸಹಾಕರ ನೀಡಿದ ರಾಜ್ಯ ಸರ್ಕಾರ, ಜಿಲ್ಲಾ ಪೊಲೀಸ್ ಇಲಾಖೆಗೆ,  ಜಿಲ್ಲಾಡಳಿತಕ್ಕೆ ಹಾಗೂ ನಗರಸಭೆ ಸಿಬ್ಬಂದಿಗೆ ಮತ್ತು ಸಹಕರಿಸಿದ ಎಲ್ಲಾ ಧರ್ಮದ ನಾಗರಿಕರಿಗೆ ಧನ್ಯವಾದಗಳನ್ನು ತಿಳಿಸಿದರಲ್ಲದೆ, ನಾವೆಲ್ಲರೂ ಭಾರತೀಯರು ಎಂಬುದನ್ನು ಮೊದಲು ಅರಿತು ಪ್ರತಿಯೊಬ್ಬರೂ ನಡೆಯ ಬೇಕೆಂದರು. 

ಭಾರತೀಯರಾಗಿ ನಾವು ದೇಶಕ್ಕೆ ಮೊದಲು ಗೌರವ ಸೂಚಿಸುವುದನ್ನು ನಾವೆಲ್ಲರೂ ಕಲಿಯಬೇಕು, ರಾಜಕಾರಣಿಗಳು ಬಂದು ಹೋಗುತ್ತಾರೆ ಅವರು ಮಾಡಿದ ಕೆಲಸ ಶಾಶ್ವತವಾಗಿ ಉಳಿಯುತ್ತದೆ. ಸೌಹಾರ್ದತೆ ಮುಖ್ಯ ಮುಂದೆಯೂ ಇದೇ ರೀತಿ ನಾವೆಲ್ಲರೂ ಒಂದಾಗಿ ಜೀವನ ಮಾಡೋಣ.ಯಾವುದೇ ಜನಾಂಗದವರಿಗೆ ನೋವು ಮಾಡುವ ಉದ್ದೇಶ ನಮಗಿಲ್ಲ,ಕ್ಲಾಕ್ ಟವರ್ ನ ಇತಿಹಾಸ ನನಗೆ ಮಾಹಿತಿ ಇದೆ.ನಾನು ಕೋಲಾರದಲ್ಲಿ ಇದ್ದರೂ

ವಿನಾಕಾರಣ ನಾನು ಸ್ಥಳಕ್ಕೆ ಆಗಮಿಸಿ ಗೊಂದಲ ಸೃಷ್ಟಿ ಮಾಡಲು ಅವಕಾಶ ನೀಡದೆ ಎಲ್ಲಾ ಮಾಹಿತಿ ಪಡೆಯುತ್ತಿದ್ದೆ ಎಂದು ತಿಳಿಸಿದರು.

ಯಾವುದೇ ಕೋಮಿಗೆ ನೋವು ಉಂಟು ಮಾಡದೆ,ಜಿಲ್ಲೆಯಲ್ಲಿ ಯಾರು ಪಟಾಕಿ ಸಿಡಿಸುವುದು, ವಿಜೋಯೋತ್ಸವ ನಡೆಸುವುದು ಮತ್ತು ಇನ್ನೊಂದು ಧರ್ಮವನ್ನು ಟೀಕಿಸುವುದು, ಪ್ರಚೋದನೆ ಮಾಡದೆ ಎಲ್ಲರೂ ಶಾಂತಿಯುತವಾಗಿ ನಡೆದುಕೊಳ್ಳಬೇಕೆಂದು ಸಂಸದರು ಸಾರ್ವಜನಿಕರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಕೆ‌.ಯು.ಡಿ.ಎ.ಅಧ್ಯಕ್ಷ ಓಂ ಶಕ್ತಿ ಚಲಪತಿ, ಬಿ.ಜೆ.ಪಿ.ಪಕ್ಷದ ಮುಖಂಡರುಗಳಾದ ತಿಮ್ಮರಾಯಪ್ಪ,ವಿಜಯ ಕುಮಾರ್,ಬಾಲಾಜಿ,ಕೆಂಬೋಡಿ ನಾರಾಯಣ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು