8:29 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ

20/03/2022, 09:55

ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ  ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತಾನಾಡಿದ ತ್ರಿವರ್ಣ ಧ್ವಜ ಹಾರಿಸಲು ಪರೋಕ್ಷವಾಗಿ  ಪ್ರತ್ಯಕ್ಷವಾಗಿ ಸಹಾಕರ ನೀಡಿದ ರಾಜ್ಯ ಸರ್ಕಾರ, ಜಿಲ್ಲಾ ಪೊಲೀಸ್ ಇಲಾಖೆಗೆ,  ಜಿಲ್ಲಾಡಳಿತಕ್ಕೆ ಹಾಗೂ ನಗರಸಭೆ ಸಿಬ್ಬಂದಿಗೆ ಮತ್ತು ಸಹಕರಿಸಿದ ಎಲ್ಲಾ ಧರ್ಮದ ನಾಗರಿಕರಿಗೆ ಧನ್ಯವಾದಗಳನ್ನು ತಿಳಿಸಿದರಲ್ಲದೆ, ನಾವೆಲ್ಲರೂ ಭಾರತೀಯರು ಎಂಬುದನ್ನು ಮೊದಲು ಅರಿತು ಪ್ರತಿಯೊಬ್ಬರೂ ನಡೆಯ ಬೇಕೆಂದರು. 

ಭಾರತೀಯರಾಗಿ ನಾವು ದೇಶಕ್ಕೆ ಮೊದಲು ಗೌರವ ಸೂಚಿಸುವುದನ್ನು ನಾವೆಲ್ಲರೂ ಕಲಿಯಬೇಕು, ರಾಜಕಾರಣಿಗಳು ಬಂದು ಹೋಗುತ್ತಾರೆ ಅವರು ಮಾಡಿದ ಕೆಲಸ ಶಾಶ್ವತವಾಗಿ ಉಳಿಯುತ್ತದೆ. ಸೌಹಾರ್ದತೆ ಮುಖ್ಯ ಮುಂದೆಯೂ ಇದೇ ರೀತಿ ನಾವೆಲ್ಲರೂ ಒಂದಾಗಿ ಜೀವನ ಮಾಡೋಣ.ಯಾವುದೇ ಜನಾಂಗದವರಿಗೆ ನೋವು ಮಾಡುವ ಉದ್ದೇಶ ನಮಗಿಲ್ಲ,ಕ್ಲಾಕ್ ಟವರ್ ನ ಇತಿಹಾಸ ನನಗೆ ಮಾಹಿತಿ ಇದೆ.ನಾನು ಕೋಲಾರದಲ್ಲಿ ಇದ್ದರೂ

ವಿನಾಕಾರಣ ನಾನು ಸ್ಥಳಕ್ಕೆ ಆಗಮಿಸಿ ಗೊಂದಲ ಸೃಷ್ಟಿ ಮಾಡಲು ಅವಕಾಶ ನೀಡದೆ ಎಲ್ಲಾ ಮಾಹಿತಿ ಪಡೆಯುತ್ತಿದ್ದೆ ಎಂದು ತಿಳಿಸಿದರು.

ಯಾವುದೇ ಕೋಮಿಗೆ ನೋವು ಉಂಟು ಮಾಡದೆ,ಜಿಲ್ಲೆಯಲ್ಲಿ ಯಾರು ಪಟಾಕಿ ಸಿಡಿಸುವುದು, ವಿಜೋಯೋತ್ಸವ ನಡೆಸುವುದು ಮತ್ತು ಇನ್ನೊಂದು ಧರ್ಮವನ್ನು ಟೀಕಿಸುವುದು, ಪ್ರಚೋದನೆ ಮಾಡದೆ ಎಲ್ಲರೂ ಶಾಂತಿಯುತವಾಗಿ ನಡೆದುಕೊಳ್ಳಬೇಕೆಂದು ಸಂಸದರು ಸಾರ್ವಜನಿಕರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಕೆ‌.ಯು.ಡಿ.ಎ.ಅಧ್ಯಕ್ಷ ಓಂ ಶಕ್ತಿ ಚಲಪತಿ, ಬಿ.ಜೆ.ಪಿ.ಪಕ್ಷದ ಮುಖಂಡರುಗಳಾದ ತಿಮ್ಮರಾಯಪ್ಪ,ವಿಜಯ ಕುಮಾರ್,ಬಾಲಾಜಿ,ಕೆಂಬೋಡಿ ನಾರಾಯಣ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು