2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ

20/03/2022, 09:55

ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ  ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತಾನಾಡಿದ ತ್ರಿವರ್ಣ ಧ್ವಜ ಹಾರಿಸಲು ಪರೋಕ್ಷವಾಗಿ  ಪ್ರತ್ಯಕ್ಷವಾಗಿ ಸಹಾಕರ ನೀಡಿದ ರಾಜ್ಯ ಸರ್ಕಾರ, ಜಿಲ್ಲಾ ಪೊಲೀಸ್ ಇಲಾಖೆಗೆ,  ಜಿಲ್ಲಾಡಳಿತಕ್ಕೆ ಹಾಗೂ ನಗರಸಭೆ ಸಿಬ್ಬಂದಿಗೆ ಮತ್ತು ಸಹಕರಿಸಿದ ಎಲ್ಲಾ ಧರ್ಮದ ನಾಗರಿಕರಿಗೆ ಧನ್ಯವಾದಗಳನ್ನು ತಿಳಿಸಿದರಲ್ಲದೆ, ನಾವೆಲ್ಲರೂ ಭಾರತೀಯರು ಎಂಬುದನ್ನು ಮೊದಲು ಅರಿತು ಪ್ರತಿಯೊಬ್ಬರೂ ನಡೆಯ ಬೇಕೆಂದರು. 

ಭಾರತೀಯರಾಗಿ ನಾವು ದೇಶಕ್ಕೆ ಮೊದಲು ಗೌರವ ಸೂಚಿಸುವುದನ್ನು ನಾವೆಲ್ಲರೂ ಕಲಿಯಬೇಕು, ರಾಜಕಾರಣಿಗಳು ಬಂದು ಹೋಗುತ್ತಾರೆ ಅವರು ಮಾಡಿದ ಕೆಲಸ ಶಾಶ್ವತವಾಗಿ ಉಳಿಯುತ್ತದೆ. ಸೌಹಾರ್ದತೆ ಮುಖ್ಯ ಮುಂದೆಯೂ ಇದೇ ರೀತಿ ನಾವೆಲ್ಲರೂ ಒಂದಾಗಿ ಜೀವನ ಮಾಡೋಣ.ಯಾವುದೇ ಜನಾಂಗದವರಿಗೆ ನೋವು ಮಾಡುವ ಉದ್ದೇಶ ನಮಗಿಲ್ಲ,ಕ್ಲಾಕ್ ಟವರ್ ನ ಇತಿಹಾಸ ನನಗೆ ಮಾಹಿತಿ ಇದೆ.ನಾನು ಕೋಲಾರದಲ್ಲಿ ಇದ್ದರೂ

ವಿನಾಕಾರಣ ನಾನು ಸ್ಥಳಕ್ಕೆ ಆಗಮಿಸಿ ಗೊಂದಲ ಸೃಷ್ಟಿ ಮಾಡಲು ಅವಕಾಶ ನೀಡದೆ ಎಲ್ಲಾ ಮಾಹಿತಿ ಪಡೆಯುತ್ತಿದ್ದೆ ಎಂದು ತಿಳಿಸಿದರು.

ಯಾವುದೇ ಕೋಮಿಗೆ ನೋವು ಉಂಟು ಮಾಡದೆ,ಜಿಲ್ಲೆಯಲ್ಲಿ ಯಾರು ಪಟಾಕಿ ಸಿಡಿಸುವುದು, ವಿಜೋಯೋತ್ಸವ ನಡೆಸುವುದು ಮತ್ತು ಇನ್ನೊಂದು ಧರ್ಮವನ್ನು ಟೀಕಿಸುವುದು, ಪ್ರಚೋದನೆ ಮಾಡದೆ ಎಲ್ಲರೂ ಶಾಂತಿಯುತವಾಗಿ ನಡೆದುಕೊಳ್ಳಬೇಕೆಂದು ಸಂಸದರು ಸಾರ್ವಜನಿಕರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಕೆ‌.ಯು.ಡಿ.ಎ.ಅಧ್ಯಕ್ಷ ಓಂ ಶಕ್ತಿ ಚಲಪತಿ, ಬಿ.ಜೆ.ಪಿ.ಪಕ್ಷದ ಮುಖಂಡರುಗಳಾದ ತಿಮ್ಮರಾಯಪ್ಪ,ವಿಜಯ ಕುಮಾರ್,ಬಾಲಾಜಿ,ಕೆಂಬೋಡಿ ನಾರಾಯಣ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು