1:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ

20/03/2022, 09:55

ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ  ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತಾನಾಡಿದ ತ್ರಿವರ್ಣ ಧ್ವಜ ಹಾರಿಸಲು ಪರೋಕ್ಷವಾಗಿ  ಪ್ರತ್ಯಕ್ಷವಾಗಿ ಸಹಾಕರ ನೀಡಿದ ರಾಜ್ಯ ಸರ್ಕಾರ, ಜಿಲ್ಲಾ ಪೊಲೀಸ್ ಇಲಾಖೆಗೆ,  ಜಿಲ್ಲಾಡಳಿತಕ್ಕೆ ಹಾಗೂ ನಗರಸಭೆ ಸಿಬ್ಬಂದಿಗೆ ಮತ್ತು ಸಹಕರಿಸಿದ ಎಲ್ಲಾ ಧರ್ಮದ ನಾಗರಿಕರಿಗೆ ಧನ್ಯವಾದಗಳನ್ನು ತಿಳಿಸಿದರಲ್ಲದೆ, ನಾವೆಲ್ಲರೂ ಭಾರತೀಯರು ಎಂಬುದನ್ನು ಮೊದಲು ಅರಿತು ಪ್ರತಿಯೊಬ್ಬರೂ ನಡೆಯ ಬೇಕೆಂದರು. 

ಭಾರತೀಯರಾಗಿ ನಾವು ದೇಶಕ್ಕೆ ಮೊದಲು ಗೌರವ ಸೂಚಿಸುವುದನ್ನು ನಾವೆಲ್ಲರೂ ಕಲಿಯಬೇಕು, ರಾಜಕಾರಣಿಗಳು ಬಂದು ಹೋಗುತ್ತಾರೆ ಅವರು ಮಾಡಿದ ಕೆಲಸ ಶಾಶ್ವತವಾಗಿ ಉಳಿಯುತ್ತದೆ. ಸೌಹಾರ್ದತೆ ಮುಖ್ಯ ಮುಂದೆಯೂ ಇದೇ ರೀತಿ ನಾವೆಲ್ಲರೂ ಒಂದಾಗಿ ಜೀವನ ಮಾಡೋಣ.ಯಾವುದೇ ಜನಾಂಗದವರಿಗೆ ನೋವು ಮಾಡುವ ಉದ್ದೇಶ ನಮಗಿಲ್ಲ,ಕ್ಲಾಕ್ ಟವರ್ ನ ಇತಿಹಾಸ ನನಗೆ ಮಾಹಿತಿ ಇದೆ.ನಾನು ಕೋಲಾರದಲ್ಲಿ ಇದ್ದರೂ

ವಿನಾಕಾರಣ ನಾನು ಸ್ಥಳಕ್ಕೆ ಆಗಮಿಸಿ ಗೊಂದಲ ಸೃಷ್ಟಿ ಮಾಡಲು ಅವಕಾಶ ನೀಡದೆ ಎಲ್ಲಾ ಮಾಹಿತಿ ಪಡೆಯುತ್ತಿದ್ದೆ ಎಂದು ತಿಳಿಸಿದರು.

ಯಾವುದೇ ಕೋಮಿಗೆ ನೋವು ಉಂಟು ಮಾಡದೆ,ಜಿಲ್ಲೆಯಲ್ಲಿ ಯಾರು ಪಟಾಕಿ ಸಿಡಿಸುವುದು, ವಿಜೋಯೋತ್ಸವ ನಡೆಸುವುದು ಮತ್ತು ಇನ್ನೊಂದು ಧರ್ಮವನ್ನು ಟೀಕಿಸುವುದು, ಪ್ರಚೋದನೆ ಮಾಡದೆ ಎಲ್ಲರೂ ಶಾಂತಿಯುತವಾಗಿ ನಡೆದುಕೊಳ್ಳಬೇಕೆಂದು ಸಂಸದರು ಸಾರ್ವಜನಿಕರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಕೆ‌.ಯು.ಡಿ.ಎ.ಅಧ್ಯಕ್ಷ ಓಂ ಶಕ್ತಿ ಚಲಪತಿ, ಬಿ.ಜೆ.ಪಿ.ಪಕ್ಷದ ಮುಖಂಡರುಗಳಾದ ತಿಮ್ಮರಾಯಪ್ಪ,ವಿಜಯ ಕುಮಾರ್,ಬಾಲಾಜಿ,ಕೆಂಬೋಡಿ ನಾರಾಯಣ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು