1:05 PM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಕೊಪ್ಪ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿದೆ ಮೃತ್ಯುಕೂಪ!; ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಲಿ

27/07/2024, 00:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ರ ಕೊಪ್ಪ ಸರ್ಕಲ್ ನಲ್ಲಿ ಭಾರಿ ಗಾತ್ರದ ಹೊಂಡ ಗುಂಡಿಯೊಂದು ರಸ್ತೆ ಮಧ್ಯದಲ್ಲಿ ಬಾಯಿ ತೆರದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.


ಹೊಂಡದಲ್ಲಿ ಮಳೆಯ ನೀರು ತುಂಬಿ ರಸ್ತೆ ಪಕ್ಕದಲ್ಲಿ ಓಡಾಟ ನಡೆಸುವ ಜನರಿಗೆ ವಾಹನಗಳ ಓಡಾಟದಿಂದ ಮಳೆ ನೀರು ಸಿಂಪಡಣೆ ಆಗುತ್ತಿದೆ. ಕೊಳಚೆ ನೀರು ಜನರಿಗೆ ಎರಚುತ್ತಿರುವುದರಿಂದ ಮಳೆಗಾಲದಲ್ಲಿ ಇದೊಂದು ಹೊಸ ಭಾಗ್ಯ ಎಂದು ಗೊಣಗುತ್ತಾ ಓಡಾಡುತ್ತಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ದಿನದಿಂದ ಈ ಹೊಂಡ ಬಾಯಿ ತೆರೆದು ಕೊಳಚೆ ನೀರು ತುಂಬಿಕೊಂಡು ಪ್ರತಿನಿತ್ಯ ಓಡಾಟ ನಡೆಸುವ ಜನರಿಗೆ ಸಮಸ್ಯೆ ಆಗುತ್ತಿದ್ದರು ಒಂದು ಬುಟ್ಟಿ ಮಣ್ಣು ಹಾಕಿ ಸುಮ್ಮನಾಗಿದ್ದರು. ಈಗ ಮತ್ತೆ ಬಾಯಿ ತೆರೆದಿದ್ದು ಇದುವರೆಗೂ ಅದನ್ನು ಮುಚ್ಚಬೇಕು ಎಂದು ಯಾರು ಕೂಡ ನೋಡಿಲ್ಲ.
ಅದೇ ರಸ್ತೆಯಲ್ಲಿ ಅಧಿಕಾರಿಗಳನ್ನು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಓಡಾಟ ನಡೆಸುತ್ತಾರೆ. ಆದರೆ ಇಲ್ಲಿಯವರೆಗೂ ಅವರ ಕಣ್ಣಿಗೆ ಈ ಬೃಹತ್ ಆಕಾರದ ಹೊಂಡ ಬಿದ್ದಿರುವುದು ಕಾಣದೇ ಇರುವುದು ವಿಷಾದನಿಯ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಹೊಂಡ ಮುಚ್ಚಿಸಿ ಯಾವುದೇ ಕೊಳಚೆ ನೀರು ಹಾರದಂತೆ ಜನರಿಗೆ ಓಡಾಟ ನಡೆಸಲು ಅವಕಾಶ ಮಾಡಿಕೊಡುತ್ತಾರ? ಎಂದು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು