1:41 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಕೊಪ್ಪ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿದೆ ಮೃತ್ಯುಕೂಪ!; ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಲಿ

27/07/2024, 00:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ರ ಕೊಪ್ಪ ಸರ್ಕಲ್ ನಲ್ಲಿ ಭಾರಿ ಗಾತ್ರದ ಹೊಂಡ ಗುಂಡಿಯೊಂದು ರಸ್ತೆ ಮಧ್ಯದಲ್ಲಿ ಬಾಯಿ ತೆರದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.


ಹೊಂಡದಲ್ಲಿ ಮಳೆಯ ನೀರು ತುಂಬಿ ರಸ್ತೆ ಪಕ್ಕದಲ್ಲಿ ಓಡಾಟ ನಡೆಸುವ ಜನರಿಗೆ ವಾಹನಗಳ ಓಡಾಟದಿಂದ ಮಳೆ ನೀರು ಸಿಂಪಡಣೆ ಆಗುತ್ತಿದೆ. ಕೊಳಚೆ ನೀರು ಜನರಿಗೆ ಎರಚುತ್ತಿರುವುದರಿಂದ ಮಳೆಗಾಲದಲ್ಲಿ ಇದೊಂದು ಹೊಸ ಭಾಗ್ಯ ಎಂದು ಗೊಣಗುತ್ತಾ ಓಡಾಡುತ್ತಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ದಿನದಿಂದ ಈ ಹೊಂಡ ಬಾಯಿ ತೆರೆದು ಕೊಳಚೆ ನೀರು ತುಂಬಿಕೊಂಡು ಪ್ರತಿನಿತ್ಯ ಓಡಾಟ ನಡೆಸುವ ಜನರಿಗೆ ಸಮಸ್ಯೆ ಆಗುತ್ತಿದ್ದರು ಒಂದು ಬುಟ್ಟಿ ಮಣ್ಣು ಹಾಕಿ ಸುಮ್ಮನಾಗಿದ್ದರು. ಈಗ ಮತ್ತೆ ಬಾಯಿ ತೆರೆದಿದ್ದು ಇದುವರೆಗೂ ಅದನ್ನು ಮುಚ್ಚಬೇಕು ಎಂದು ಯಾರು ಕೂಡ ನೋಡಿಲ್ಲ.
ಅದೇ ರಸ್ತೆಯಲ್ಲಿ ಅಧಿಕಾರಿಗಳನ್ನು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಓಡಾಟ ನಡೆಸುತ್ತಾರೆ. ಆದರೆ ಇಲ್ಲಿಯವರೆಗೂ ಅವರ ಕಣ್ಣಿಗೆ ಈ ಬೃಹತ್ ಆಕಾರದ ಹೊಂಡ ಬಿದ್ದಿರುವುದು ಕಾಣದೇ ಇರುವುದು ವಿಷಾದನಿಯ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಹೊಂಡ ಮುಚ್ಚಿಸಿ ಯಾವುದೇ ಕೊಳಚೆ ನೀರು ಹಾರದಂತೆ ಜನರಿಗೆ ಓಡಾಟ ನಡೆಸಲು ಅವಕಾಶ ಮಾಡಿಕೊಡುತ್ತಾರ? ಎಂದು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು