12:49 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕೊಪ್ಪ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿದೆ ಮೃತ್ಯುಕೂಪ!; ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಲಿ

27/07/2024, 00:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ರ ಕೊಪ್ಪ ಸರ್ಕಲ್ ನಲ್ಲಿ ಭಾರಿ ಗಾತ್ರದ ಹೊಂಡ ಗುಂಡಿಯೊಂದು ರಸ್ತೆ ಮಧ್ಯದಲ್ಲಿ ಬಾಯಿ ತೆರದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.


ಹೊಂಡದಲ್ಲಿ ಮಳೆಯ ನೀರು ತುಂಬಿ ರಸ್ತೆ ಪಕ್ಕದಲ್ಲಿ ಓಡಾಟ ನಡೆಸುವ ಜನರಿಗೆ ವಾಹನಗಳ ಓಡಾಟದಿಂದ ಮಳೆ ನೀರು ಸಿಂಪಡಣೆ ಆಗುತ್ತಿದೆ. ಕೊಳಚೆ ನೀರು ಜನರಿಗೆ ಎರಚುತ್ತಿರುವುದರಿಂದ ಮಳೆಗಾಲದಲ್ಲಿ ಇದೊಂದು ಹೊಸ ಭಾಗ್ಯ ಎಂದು ಗೊಣಗುತ್ತಾ ಓಡಾಡುತ್ತಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ದಿನದಿಂದ ಈ ಹೊಂಡ ಬಾಯಿ ತೆರೆದು ಕೊಳಚೆ ನೀರು ತುಂಬಿಕೊಂಡು ಪ್ರತಿನಿತ್ಯ ಓಡಾಟ ನಡೆಸುವ ಜನರಿಗೆ ಸಮಸ್ಯೆ ಆಗುತ್ತಿದ್ದರು ಒಂದು ಬುಟ್ಟಿ ಮಣ್ಣು ಹಾಕಿ ಸುಮ್ಮನಾಗಿದ್ದರು. ಈಗ ಮತ್ತೆ ಬಾಯಿ ತೆರೆದಿದ್ದು ಇದುವರೆಗೂ ಅದನ್ನು ಮುಚ್ಚಬೇಕು ಎಂದು ಯಾರು ಕೂಡ ನೋಡಿಲ್ಲ.
ಅದೇ ರಸ್ತೆಯಲ್ಲಿ ಅಧಿಕಾರಿಗಳನ್ನು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಓಡಾಟ ನಡೆಸುತ್ತಾರೆ. ಆದರೆ ಇಲ್ಲಿಯವರೆಗೂ ಅವರ ಕಣ್ಣಿಗೆ ಈ ಬೃಹತ್ ಆಕಾರದ ಹೊಂಡ ಬಿದ್ದಿರುವುದು ಕಾಣದೇ ಇರುವುದು ವಿಷಾದನಿಯ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಹೊಂಡ ಮುಚ್ಚಿಸಿ ಯಾವುದೇ ಕೊಳಚೆ ನೀರು ಹಾರದಂತೆ ಜನರಿಗೆ ಓಡಾಟ ನಡೆಸಲು ಅವಕಾಶ ಮಾಡಿಕೊಡುತ್ತಾರ? ಎಂದು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು