9:41 PM Sunday22 - June 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೊಪ್ಪ: ಬಿಜೆಪಿ ಮುಖಂಡನ ಕಾಫಿತೋಟ ನಾಶಪಡಿಸಿದ ದುಷ್ಕರ್ಮಿಗಳು; ಫಸಲಿಗೆ ಬಂದಿದ್ದ ಗಿಡಗಳು

22/06/2025, 21:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿ ನಾಶಪಡಿಸಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ.


ಬಿಜೆಪಿ ಮುಖಂಡ ಅಜಿತ್ ತುಪ್ಪೂರು ಎಂಬುವರಿಗೆ ಸೇರಿದ ತೋಟ ಇದಾಗಿದೆ.
ಸುಮಾರು 2 ಎಕರೆ, 750ಕ್ಕೂ ಹೆಚ್ಚು ಗಿಡಗಳನ್ನ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಫಸಲಿಗೆ ಬಂದಿದ್ದ‌ 10 ವರ್ಷ ವಯಸ್ಸಿನ ಕಾಫಿ ಗಿಡಗಳು ಇದಾಗಿವೆ.
ಗಿಡಗಳ ಬುಡಕ್ಕೆ ಕೊಡಲಿ ಹಾಕಿ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ತೋಟವನ್ನ ಕಳೆದುಕೊಂಡು ಅಜಿತ್ ಕುಟುಂಬ ಆತಂಕಕ್ಕೀಡಾಗಿದೆ.
ದಶಕಗಳಿಂದ ಮಕ್ಕಳಂತೆ ಸಾಕಿ ಬೆಳೆಸಿದ್ದ ಕಾಫಿತೋಟ ನಾಶವಾಗಿದೆ. ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು