7:27 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು