6:05 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕೊಪ್ಪಳ: ಬಾಡಿಗೆ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗನ ತ್ರಿವಳಿ ಶವ ಪತ್ತೆ; ಕೊಲೆ ಶಂಕೆ

28/05/2024, 15:24

ಕೊಪ್ಪಳ(reporterkarnataka.com): ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ಬಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾವನ್ನಪ್ಪಿದವರನ್ನು ಹೊಸಲಿಂಗಾಪುರದ ರಾಜೇಶ್ವರಿ(50), ವಸಂತಾ(28) ಹಾಗೂ ವಸಂತಾ ಅವರ ಪುತ್ರ ಸಾಯಿಧರ್ಮ ತೇಜ್(5) ಎಂದು ಗುರುತಿಸಲಾಗಿದೆ.
ವಸಂತಾ ಅವರಿಗೆ ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ಯುವಕನ ಜತೆ ಮದುವೆ ಮಾಡಲಾಗಿತ್ತು. ಗಂಡನಿಂದ ದೂರವಾದ ವಸಂತಾ ಕಳೆದ ಎರಡು ವರ್ಷಗಳಿಂದ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿ ತಾಯಿ ಹಾಗೂ ಮಗನ ಜತೆ ವಾಸವಾಗಿದ್ದರು. ಸೋಮವಾರ ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬಳು ಮಗಳು ಮೊಬೈಲ್ ಕರೆ ಮಾಡಿದ್ದಳು. ಆದರೆ ಇತ್ತ ಕಡೆ ರಾಜೇಶ್ವರಿ ಅವರು ಕರೆ ಸ್ವೀಕರಿಸಿಲ್ಲ. ಹಾಗಾಗಿ ಮಂಗಳವಾರ ಬೆಳಗ್ಗೆ ಮಗಳು ಬಂದು ನೋಡುವಾಗ ಮೂವರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ರಾಜೇಶ್ವರಿ ಹಾಗೂ ಸಾಯಿಧರ್ಮ ತೇಜ್ ಅವರ ಶವ ಬೆಡ್ ರೂಮ್ ನಲ್ಲಿ ಹಾಗೂ ವಸಂತ ಅವರ ಶವ ಕಿಚನ್ ನಲ್ಲಿ ಪತ್ತೆಯಾಗಿದೆ. ಇದೊಂದು ಕೊಲೆ ಕೃತ್ಯವಿರಬೇಕೆಂದು ಶಂಕಿಸಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು