4:31 AM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಕೊಪ್ಪಳ: ಬಾಡಿಗೆ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗನ ತ್ರಿವಳಿ ಶವ ಪತ್ತೆ; ಕೊಲೆ ಶಂಕೆ

28/05/2024, 15:24

ಕೊಪ್ಪಳ(reporterkarnataka.com): ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ಬಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾವನ್ನಪ್ಪಿದವರನ್ನು ಹೊಸಲಿಂಗಾಪುರದ ರಾಜೇಶ್ವರಿ(50), ವಸಂತಾ(28) ಹಾಗೂ ವಸಂತಾ ಅವರ ಪುತ್ರ ಸಾಯಿಧರ್ಮ ತೇಜ್(5) ಎಂದು ಗುರುತಿಸಲಾಗಿದೆ.
ವಸಂತಾ ಅವರಿಗೆ ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ಯುವಕನ ಜತೆ ಮದುವೆ ಮಾಡಲಾಗಿತ್ತು. ಗಂಡನಿಂದ ದೂರವಾದ ವಸಂತಾ ಕಳೆದ ಎರಡು ವರ್ಷಗಳಿಂದ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿ ತಾಯಿ ಹಾಗೂ ಮಗನ ಜತೆ ವಾಸವಾಗಿದ್ದರು. ಸೋಮವಾರ ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬಳು ಮಗಳು ಮೊಬೈಲ್ ಕರೆ ಮಾಡಿದ್ದಳು. ಆದರೆ ಇತ್ತ ಕಡೆ ರಾಜೇಶ್ವರಿ ಅವರು ಕರೆ ಸ್ವೀಕರಿಸಿಲ್ಲ. ಹಾಗಾಗಿ ಮಂಗಳವಾರ ಬೆಳಗ್ಗೆ ಮಗಳು ಬಂದು ನೋಡುವಾಗ ಮೂವರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ರಾಜೇಶ್ವರಿ ಹಾಗೂ ಸಾಯಿಧರ್ಮ ತೇಜ್ ಅವರ ಶವ ಬೆಡ್ ರೂಮ್ ನಲ್ಲಿ ಹಾಗೂ ವಸಂತ ಅವರ ಶವ ಕಿಚನ್ ನಲ್ಲಿ ಪತ್ತೆಯಾಗಿದೆ. ಇದೊಂದು ಕೊಲೆ ಕೃತ್ಯವಿರಬೇಕೆಂದು ಶಂಕಿಸಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು