7:25 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ

27/04/2026, 22:23

ಕೊಪ್ಪಳ(reporterkarnataka.com): ಪ್ರಕೃತಿಯ ಮುನಿಸಿಗೆ ಅನ್ನದಾತನೊಬ್ಬ ಬಲಿಯಾದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬೆಂಚಮಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ದಿಢೀರ್ ಕಾಣಿಸಿಕೊಂಡ ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ರೈತ ದೇವರಾಯನಗೌಡ ಪೊಲೀಸ್ ಪಾಟೀಲ (50) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

*ಘಟನೆಯ ವಿವರ:*
ಸೋಮವಾರ ಮಧ್ಯಾಹ್ನ ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣವಿತ್ತು. ಬೆಂಚಮಟ್ಟಿ ಗ್ರಾಮದ ರೈತ ದೇವರಾಯನಗೌಡ ಅವರು ಎಂದಿನಂತೆ ತಮ್ಮ ದೈನಂದಿನ ಕೃಷಿ ಚಟುವಟಿಕೆಗಳಿಗಾಗಿ ಹೊಲಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಇದ್ದಕ್ಕಿದ್ದಂತೆ ಗುಡುಗು ಮತ್ತು ಮಿಂಚಿನೊಂದಿಗೆ ಮಳೆ ಸುರಿಯಲಾರಂಭಿಸಿತು.

*ಮರದ ಕೆಳಗೆ ಆಶ್ರಯ*
ಮಳೆಯಿಂದ ರಕ್ಷಣೆ ಪಡೆಯಲು ದೇವರಾಯನಗೌಡ ಅವರು ಸಮೀಪದಲ್ಲಿದ್ದ ಮರದ ಕೆಳಗೆ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಭೀಕರ ಶಬ್ದದೊಂದಿಗೆ ಸಿಡಿಲು ಮರದ ಮೇಲೆ ಅಪ್ಪಳಿಸಿದೆ. ಮರದ ಕೆಳಗೆ ಕುಳಿತಿದ್ದ ದೇವರಾಯನಗೌಡ ಅವರ ಮೇಲೆ ನೇರವಾಗಿ ಸಿಡಿಲು ಬಡಿದ ಪರಿಣಾಮ, ಅವರು ತೀವ್ರವಾಗಿ ಸುಟ್ಟುಹೋಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

*ಪೊಲೀಸ್ ಭೇಟಿ*
ವಿಷಯ ತಿಳಿಯುತ್ತಿದ್ದಂತೆ ಕುಷ್ಟಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ಎಚ್ಚರಿಕೆ ಇರಲಿ:*
ಮಳೆಗಾಲ ಆರಂಭದ ಈ ಸಮಯದಲ್ಲಿ ಗುಡುಗು, ಮಿಂಚು ಹೆಚ್ಚಾಗಿರುತ್ತದೆ. ರೈತರು ಮತ್ತು ಸಾರ್ವಜನಿಕರು ಗುಡುಗು ಸಹಿತ ಮಳೆ ಬರುವಾಗ ಮರದ ಕೆಳಗೆ ಅಥವಾ ಬಯಲು ಪ್ರದೇಶದಲ್ಲಿ ಇರಬಾರದು. ಎಲೆಕ್ಟ್ರಿಕ್ ಕಂಬಗಳು ಮತ್ತು ನೀರಿನ ಸೆಲೆ ಇರುವ ಜಾಗದಿಂದ ದೂರವಿರಬೇಕು ಎಂದು ಈ ಮೂಲಕ ಮತ್ತೊಮ್ಮೆ ಎಚ್ಚರಿಸಲಾಗಿದೆ.

*ಮುನ್ಸೂಚನೆ ಗಮನಿಸಿ:*
ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ನೀಡುವ ಮುನ್ಸೂಚನೆ ಗಮನಿಸಿ. ನೀಡಿದಂತ ಸೂಚನೆಗಳನ್ನು ಪಾಲಿಸಿ, ಅಲ್ಲದೇ, ಆರೆಂಜ್​ ಅಲರ್ಟ್​ ಸೇರಿ ವಿವಿಧ ಸಂಧರ್ಭ ರೈತರು, ಗ್ರಾಮಸ್ಥರು ಜಾಗೃತಿ ವಹಿಸುವುದು ಮುಖ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು