10:26 PM Monday27 - April 2026
ಬ್ರೇಕಿಂಗ್ ನ್ಯೂಸ್
Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು

ಇತ್ತೀಚಿನ ಸುದ್ದಿ

Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ

27/04/2026, 22:23

ಕೊಪ್ಪಳ(reporterkarnataka.com): ಪ್ರಕೃತಿಯ ಮುನಿಸಿಗೆ ಅನ್ನದಾತನೊಬ್ಬ ಬಲಿಯಾದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬೆಂಚಮಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ದಿಢೀರ್ ಕಾಣಿಸಿಕೊಂಡ ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ರೈತ ದೇವರಾಯನಗೌಡ ಪೊಲೀಸ್ ಪಾಟೀಲ (50) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

*ಘಟನೆಯ ವಿವರ:*
ಸೋಮವಾರ ಮಧ್ಯಾಹ್ನ ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣವಿತ್ತು. ಬೆಂಚಮಟ್ಟಿ ಗ್ರಾಮದ ರೈತ ದೇವರಾಯನಗೌಡ ಅವರು ಎಂದಿನಂತೆ ತಮ್ಮ ದೈನಂದಿನ ಕೃಷಿ ಚಟುವಟಿಕೆಗಳಿಗಾಗಿ ಹೊಲಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಇದ್ದಕ್ಕಿದ್ದಂತೆ ಗುಡುಗು ಮತ್ತು ಮಿಂಚಿನೊಂದಿಗೆ ಮಳೆ ಸುರಿಯಲಾರಂಭಿಸಿತು.

*ಮರದ ಕೆಳಗೆ ಆಶ್ರಯ*
ಮಳೆಯಿಂದ ರಕ್ಷಣೆ ಪಡೆಯಲು ದೇವರಾಯನಗೌಡ ಅವರು ಸಮೀಪದಲ್ಲಿದ್ದ ಮರದ ಕೆಳಗೆ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಭೀಕರ ಶಬ್ದದೊಂದಿಗೆ ಸಿಡಿಲು ಮರದ ಮೇಲೆ ಅಪ್ಪಳಿಸಿದೆ. ಮರದ ಕೆಳಗೆ ಕುಳಿತಿದ್ದ ದೇವರಾಯನಗೌಡ ಅವರ ಮೇಲೆ ನೇರವಾಗಿ ಸಿಡಿಲು ಬಡಿದ ಪರಿಣಾಮ, ಅವರು ತೀವ್ರವಾಗಿ ಸುಟ್ಟುಹೋಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

*ಪೊಲೀಸ್ ಭೇಟಿ*
ವಿಷಯ ತಿಳಿಯುತ್ತಿದ್ದಂತೆ ಕುಷ್ಟಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ಎಚ್ಚರಿಕೆ ಇರಲಿ:*
ಮಳೆಗಾಲ ಆರಂಭದ ಈ ಸಮಯದಲ್ಲಿ ಗುಡುಗು, ಮಿಂಚು ಹೆಚ್ಚಾಗಿರುತ್ತದೆ. ರೈತರು ಮತ್ತು ಸಾರ್ವಜನಿಕರು ಗುಡುಗು ಸಹಿತ ಮಳೆ ಬರುವಾಗ ಮರದ ಕೆಳಗೆ ಅಥವಾ ಬಯಲು ಪ್ರದೇಶದಲ್ಲಿ ಇರಬಾರದು. ಎಲೆಕ್ಟ್ರಿಕ್ ಕಂಬಗಳು ಮತ್ತು ನೀರಿನ ಸೆಲೆ ಇರುವ ಜಾಗದಿಂದ ದೂರವಿರಬೇಕು ಎಂದು ಈ ಮೂಲಕ ಮತ್ತೊಮ್ಮೆ ಎಚ್ಚರಿಸಲಾಗಿದೆ.

*ಮುನ್ಸೂಚನೆ ಗಮನಿಸಿ:*
ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ನೀಡುವ ಮುನ್ಸೂಚನೆ ಗಮನಿಸಿ. ನೀಡಿದಂತ ಸೂಚನೆಗಳನ್ನು ಪಾಲಿಸಿ, ಅಲ್ಲದೇ, ಆರೆಂಜ್​ ಅಲರ್ಟ್​ ಸೇರಿ ವಿವಿಧ ಸಂಧರ್ಭ ರೈತರು, ಗ್ರಾಮಸ್ಥರು ಜಾಗೃತಿ ವಹಿಸುವುದು ಮುಖ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು