12:03 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ !

19/06/2021, 21:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . 


ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ. ಬೇಡಿಕೆಗೆ ಅನುಗುಣವಾಗಿ ರೈತರ ರೈಲನ್ನು ಓಡಿಸಲಾಗುವುದು . ರೈತರು ತಮ್ಮ ಉತ್ಪನ್ನಗಳಿಗೆ ಹೊರ ರಾಜ್ಯಗಳಿಂದ ಬೇಡಿಕೆ ಪಡೆದುಕೊಂಡು ಶೇ .೫೦ ರ ರಿಯಾಯಿತಿ ದರದಲ್ಲಿ ಸಾಗಾಣಿಕೆ ಮಾಡಬಹುದಾಗಿದೆ ಎಂದು ಹೇಳಿದರು . 

ರಸ್ತೆ ಮೂಲಕ ದೆಹಲಿಗೆ ಮಾವು ಮತ್ತಿತರ ಉತ್ಪನ್ನಗಳನ್ನು ಸಾಗಿಸಲು ಕೆಜಿಯೊಂದಕ್ಕೆ ರೂ .೭.೮೦ ಖರ್ಚು ಬರುತ್ತದೆ . ರೈಲಿನ ಮೂಲಕ ರೂ .೨.೮೨ ಖರ್ಚು ತಗಲುತ್ತದೆ . ಮಾವಿನ ಹಣ್ಣನ್ನು ಮಾತ್ರವಲ್ಲದೆ , ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಹೆಚ್ಚಾಗಿ ಬೆಳೆಯುವ ಟೊಮೇಟೊ ಮತ್ತಿತರ ತರಕಾರಿಗಳನ್ನೂ ಸಹ ದೇಶದ ವಿವಿಧ ನಗರಗಳಿಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು . 

ಬಂಗಾರಪೇಟೆ , ಕೋಲಾರ , ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ಸೇರುವ ರೈಲು ಮಾರ್ಗವನ್ನು ವಿದ್ಯುತೀಕರಣ ಗೊಳಿಸಲಾಗುವುದು . ಈ ಕಾರ್ಯಕ್ಕೆ  ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಿದರು.


 ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ , ಕಿಸಾನ್ ರೈಲು ಸಂಕಷ್ಟದಲ್ಲಿರುವ ರೈತರಿಗೆ ವರದಾನವಾಗಲಿದೆ . ಮೊದಲ ಬಾರಿಗೆ ಇಲ್ಲಿಂದ ದೆಹಲಿಯ ಆದರ್ಶ ನಗರಕ್ಕೆ ೨೫೦ ಟನ್ ಮಾವಿನ ಹಣ್ಣನ್ನು ಕಳಿಸಲಾಗುತ್ತಿದೆ . ರೈತರ ಹಿತದೃಷ್ಟಿಯಿಂದ ಈ ಪ್ರಕ್ರಿಯೆ ಮುಂದುವರಿಯಲಿದ್ದು , ಹೆಚ್ಚಿನ ಅನುಕೂಲವಾಗುವುದು .ರೈತರು ನೇರವಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಸೇವೆ ಪಡೆದುಕೊಳ್ಳಬೇಕು ಎಂದು ನುಡಿದರು . ರೈಲ್ವೆ ಉಪ ವ್ಯವಸ್ಥಾಪಕ ಅಶೋಕ್ ಕುಮಾರ್ ಶರ್ಮ , ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್. ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ರೆಡ್ಡಿ , ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ , ಮಾಜಿ ಅಧ್ಯಕ್ಷ ಬಂಡಪಲ್ಲಿ ಚಂದ್ರಾರೆಡ್ಡಿ , ಮುಖಂಡರಾದ ಎಂ.ಲಕ್ಷ್ಮಣಗೌಡ , ನಾರಾಯಣಸ್ವಾಮಿ , ಪುರಸಭಾ ಸದಸ್ಯರಾದ ನಾಗರಾಜ್ , ಪತಿವ್ವಲ್ಲಾ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು