10:12 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ !

19/06/2021, 21:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . 


ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ. ಬೇಡಿಕೆಗೆ ಅನುಗುಣವಾಗಿ ರೈತರ ರೈಲನ್ನು ಓಡಿಸಲಾಗುವುದು . ರೈತರು ತಮ್ಮ ಉತ್ಪನ್ನಗಳಿಗೆ ಹೊರ ರಾಜ್ಯಗಳಿಂದ ಬೇಡಿಕೆ ಪಡೆದುಕೊಂಡು ಶೇ .೫೦ ರ ರಿಯಾಯಿತಿ ದರದಲ್ಲಿ ಸಾಗಾಣಿಕೆ ಮಾಡಬಹುದಾಗಿದೆ ಎಂದು ಹೇಳಿದರು . 

ರಸ್ತೆ ಮೂಲಕ ದೆಹಲಿಗೆ ಮಾವು ಮತ್ತಿತರ ಉತ್ಪನ್ನಗಳನ್ನು ಸಾಗಿಸಲು ಕೆಜಿಯೊಂದಕ್ಕೆ ರೂ .೭.೮೦ ಖರ್ಚು ಬರುತ್ತದೆ . ರೈಲಿನ ಮೂಲಕ ರೂ .೨.೮೨ ಖರ್ಚು ತಗಲುತ್ತದೆ . ಮಾವಿನ ಹಣ್ಣನ್ನು ಮಾತ್ರವಲ್ಲದೆ , ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಹೆಚ್ಚಾಗಿ ಬೆಳೆಯುವ ಟೊಮೇಟೊ ಮತ್ತಿತರ ತರಕಾರಿಗಳನ್ನೂ ಸಹ ದೇಶದ ವಿವಿಧ ನಗರಗಳಿಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು . 

ಬಂಗಾರಪೇಟೆ , ಕೋಲಾರ , ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ಸೇರುವ ರೈಲು ಮಾರ್ಗವನ್ನು ವಿದ್ಯುತೀಕರಣ ಗೊಳಿಸಲಾಗುವುದು . ಈ ಕಾರ್ಯಕ್ಕೆ  ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಿದರು.


 ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ , ಕಿಸಾನ್ ರೈಲು ಸಂಕಷ್ಟದಲ್ಲಿರುವ ರೈತರಿಗೆ ವರದಾನವಾಗಲಿದೆ . ಮೊದಲ ಬಾರಿಗೆ ಇಲ್ಲಿಂದ ದೆಹಲಿಯ ಆದರ್ಶ ನಗರಕ್ಕೆ ೨೫೦ ಟನ್ ಮಾವಿನ ಹಣ್ಣನ್ನು ಕಳಿಸಲಾಗುತ್ತಿದೆ . ರೈತರ ಹಿತದೃಷ್ಟಿಯಿಂದ ಈ ಪ್ರಕ್ರಿಯೆ ಮುಂದುವರಿಯಲಿದ್ದು , ಹೆಚ್ಚಿನ ಅನುಕೂಲವಾಗುವುದು .ರೈತರು ನೇರವಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಸೇವೆ ಪಡೆದುಕೊಳ್ಳಬೇಕು ಎಂದು ನುಡಿದರು . ರೈಲ್ವೆ ಉಪ ವ್ಯವಸ್ಥಾಪಕ ಅಶೋಕ್ ಕುಮಾರ್ ಶರ್ಮ , ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್. ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ರೆಡ್ಡಿ , ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ , ಮಾಜಿ ಅಧ್ಯಕ್ಷ ಬಂಡಪಲ್ಲಿ ಚಂದ್ರಾರೆಡ್ಡಿ , ಮುಖಂಡರಾದ ಎಂ.ಲಕ್ಷ್ಮಣಗೌಡ , ನಾರಾಯಣಸ್ವಾಮಿ , ಪುರಸಭಾ ಸದಸ್ಯರಾದ ನಾಗರಾಜ್ , ಪತಿವ್ವಲ್ಲಾ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು