12:04 AM Friday4 - July 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28…

ಇತ್ತೀಚಿನ ಸುದ್ದಿ

ಕೋಟ: ಕೊರಗ ಸಮುದಾಯದ ಮೆಹಂದಿ ಪಾರ್ಟಿಯಲ್ಲಿ ಪೊಲೀಸ್ ದೌರ್ಜನ್ಯ; ಮದು ಮಗ ಸೇರಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ಆರೋಪ

28/12/2021, 18:15

ಕೋಟ(reporterkarnataka.com): ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದು ಮಗ, ಹೆಣ್ಣು ಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. 

ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಹಲ್ಲೆ ನಡೆಸಿರುವ ಘಟನೆಗೆ ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಲು ಯಾವುದೇ ಕಾರಣವೂ ಇರಲಿಲ್ಲ ಎಂದು ದೂರಿದ್ದಾರೆ.

ಪೊಲೀಸರ ದಾಳಿಗೆ ಕಾರಣವೇನು.?

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ಕೋಟತಟ್ಟು ಗ್ರಾಮದ ಬಾರಿಕೆರೆ ನಿವಾಸಿ ರಾಜೇಶ್ ಅವರ ಮದುವೆ ಕಾರ್ಯಕ್ರಮವು ಡಿ. 29 ರಂದು ಕುಮಟಾದಲ್ಲಿ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ. 27 ರಂದು ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 9.40 ರ ಸುಮಾರಿಗೆ ಹೆದ್ದಾರಿ ಗಸ್ತು ಪೊಲೀಸರು ಮನೆಗೆ ಬಂದಿದ್ದು, ಡಿಜೆ ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಈ ವೇಳೆ ನೈಟ್ ಕರ್ಫ್ಯೂ ನಾಳೆ ರಾತ್ರಿಯಿಂದ ಜಾರಿ ಆಗುತ್ತದೆ. ನಮ್ಮ ಡಿಜೆಯಿಂದ ಯಾರಿಗೂ ತೊಂದರೆ ಆಗುತ್ತಿಲ್ಲ. ಮನೆಯವರೇ ಹೆಚ್ಚಿನ ಮಂದಿ ಇದ್ದು, ಸ್ವಲ್ಪ ಹೊತ್ತು ಕುಣಿದು ಆ ಬಳಿಕ ಬಂದ್ ಮಾಡುವುದಾಗಿ ತಿಳಿಸಿದ್ದರು. ಆ ಬಳಿಕ ಪೊಲೀಸರು ಅಲ್ಲಿಂದ ಹಿಂದೆ ಹೋಗಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಕೋಟ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾವ ಕಾರಣವೂ ಕೇಳದೇ ಡಿಕೆ, ಲೈಟ್ ಆಫ್‌ ಮಾಡಿ ಮೆಹಂದಿ ಮನೆಯಲ್ಲಿದ್ದ ಹೆಣ್ಣು ಮಕ್ಕಳು, ಮಹಿಳೆಯರು, ಮಧುಮಗನಿಗೆ, ಹಿರಿಯರು ಯಾರನ್ನು ನೋಡದೇ ಏಕಾಏಕಿಯಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು