9:48 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೋಟ: ಕೊರಗ ಸಮುದಾಯದ ಮೆಹಂದಿ ಪಾರ್ಟಿಯಲ್ಲಿ ಪೊಲೀಸ್ ದೌರ್ಜನ್ಯ; ಮದು ಮಗ ಸೇರಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ಆರೋಪ

28/12/2021, 18:15

ಕೋಟ(reporterkarnataka.com): ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದು ಮಗ, ಹೆಣ್ಣು ಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. 

ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಹಲ್ಲೆ ನಡೆಸಿರುವ ಘಟನೆಗೆ ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಲು ಯಾವುದೇ ಕಾರಣವೂ ಇರಲಿಲ್ಲ ಎಂದು ದೂರಿದ್ದಾರೆ.

ಪೊಲೀಸರ ದಾಳಿಗೆ ಕಾರಣವೇನು.?

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ಕೋಟತಟ್ಟು ಗ್ರಾಮದ ಬಾರಿಕೆರೆ ನಿವಾಸಿ ರಾಜೇಶ್ ಅವರ ಮದುವೆ ಕಾರ್ಯಕ್ರಮವು ಡಿ. 29 ರಂದು ಕುಮಟಾದಲ್ಲಿ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ. 27 ರಂದು ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 9.40 ರ ಸುಮಾರಿಗೆ ಹೆದ್ದಾರಿ ಗಸ್ತು ಪೊಲೀಸರು ಮನೆಗೆ ಬಂದಿದ್ದು, ಡಿಜೆ ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಈ ವೇಳೆ ನೈಟ್ ಕರ್ಫ್ಯೂ ನಾಳೆ ರಾತ್ರಿಯಿಂದ ಜಾರಿ ಆಗುತ್ತದೆ. ನಮ್ಮ ಡಿಜೆಯಿಂದ ಯಾರಿಗೂ ತೊಂದರೆ ಆಗುತ್ತಿಲ್ಲ. ಮನೆಯವರೇ ಹೆಚ್ಚಿನ ಮಂದಿ ಇದ್ದು, ಸ್ವಲ್ಪ ಹೊತ್ತು ಕುಣಿದು ಆ ಬಳಿಕ ಬಂದ್ ಮಾಡುವುದಾಗಿ ತಿಳಿಸಿದ್ದರು. ಆ ಬಳಿಕ ಪೊಲೀಸರು ಅಲ್ಲಿಂದ ಹಿಂದೆ ಹೋಗಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಕೋಟ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾವ ಕಾರಣವೂ ಕೇಳದೇ ಡಿಕೆ, ಲೈಟ್ ಆಫ್‌ ಮಾಡಿ ಮೆಹಂದಿ ಮನೆಯಲ್ಲಿದ್ದ ಹೆಣ್ಣು ಮಕ್ಕಳು, ಮಹಿಳೆಯರು, ಮಧುಮಗನಿಗೆ, ಹಿರಿಯರು ಯಾರನ್ನು ನೋಡದೇ ಏಕಾಏಕಿಯಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು