1:59 AM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ

21/01/2025, 22:38

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುರುಗನ್, ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಮಾಹಿತಿ ಲಭ್ಯವಾಗಿಲ್ಲ.
ಮುಂಬೈಯ ಧಾರಾವಿಯಲ್ಲಿ 10 ಮಂದಿಯ ಖತರ್ನಾಕ್ ಗ್ಯಾಂಗ್ ಬ್ಯಾಂಕ್ ದರೋಡೆಗೆ ಪ್ಲಾನ್ ಹಾಕಿತ್ತು. ಈ ಗ್ಯಾಂಗ್ ನಿಂದ ಇಬ್ಬರನ್ನು ಹೊರಗಿಡಲಾಗಿತ್ತು. ಈ ಹೊರಗಿಟ್ಟ ಇಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯಂತೆ ಮುಂಬೈ ಪೊಲೀಸರು ಅವರ ಮನೆಯ ಮೇಲೆ ನಿಗಾ ಇಟ್ಟಿದ್ದರು. ಈ ನಡುವೆ ದರೋಡೆಕೋರರಲ್ಲಿ ಒಬ್ಬನಾದ ಮುರುಗನ್ ಮಂಗಳೂರಿನ ಕೋಟೆಕಾರಿಗೆ ಬಂದು ಕೋಟೆಕಾರು ಸಹಕಾರಿ ಸಂಘದಿಂದ ನಗ ಮತ್ತು ನಗದು ದೋಚುವ ಪ್ಲಾನ್ ಹಾಕಿದ್ದ. ಈ ಪ್ಲಾನ್ ನಂತೆ ದರೋಡೆ ನಡೆದಿದೆ. ಈ ಬಗ್ಗೆ ಮಂಗಳೂರು ಪೊಲೀಸರಿಗೆ ಮುಂಬೈ ಪೊಲೀಸರು ಮಾಹಿತಿ ನೀಡಿದ್ದರು. ಮುಂಬೈ ಪೊಲೀಸರು ನೀಡಿದ ಸುಳಿವಿನ ಆಧಾರದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದರೋಡೆಕೋರರು ಸಹಕಾರಿ ಸಂಘ ಲೂಟಿ ಮಾಡಿದ ಬಳಿಕ ಕೇರಳ ಮಾರ್ಗವಾಗಿ ಫಿಯೆಟ್ ಕಾರಿನಲ್ಲಿ ಹಣ ಮತ್ತು ಚಿನ್ನದ ಗೋಣಿಯನ್ನು ಒಯ್ದಿದ್ದರು. ಫಿಯೆಟ್ ಕಾರಿನಲ್ಲೇ ಸುಮಾರು 700 ಕಿಮೀ. ಪ್ರಯಾಣ ನಡೆಸಿದ್ಸರು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು